September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

ಬೆಳ್ತಂಗಡಿ : ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ವಿಶ್ವವಿದ್ಯಾಲಯ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಯೋಗದ ಜಾಗೃತಿ ಮೂಡಿಸಲು ಭವಿಷ್ಯದ ದುಃಖಗಳನ್ನು ದೂರ ಮಾಡಲು ಯೋಗ ಎಂಬ ಧ್ಯೇಯದೊಂದಿಗೆ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯು ಜುಲೈ 22 ಸೋಮವಾರ ದಿಂದ ಜುಲೈ 23 ಮಂಗಳವಾರ 10 ಗಂಟೆಯವರೆಗೆ 25 ಗಂಟೆಗಳ ನಿರಂತರ ಯೋಗ ತರಬೇತಿ ನಡೆಯಲಿದೆ.

ಯೋಗ ಗುರು ಕುಶಾಲಪ್ಪ ಗೌಡ ರವರು ತಲಾ ಒಂದೂವರೆ ಗಂಟೆಯ 17 ಬ್ಯಾಚ್ ಗಳಲ್ಲಿ ತರಬೇತಿ ನೀಡಲಿದ್ದು, ಭಾಗವಹಿಸುವ ಶಿಬಿರಾರ್ಥಿಗಳಿಗೆ ರೂಪಾಯಿ 500 ಮೌಲ್ಯದ ಯೋಗ ಪುಸ್ತಕ, ಯೋಗ ಬಟ್ಟೆ, ಯೋಗ ಕ್ಯಾಲೆಂಡರ್,ಯೋಗ ಪ್ರಮಾಣ ಪತ್ರ ಮತ್ತು ಉಪಹಾರ ನೀಡಲಾಗುವುದು, ಮುಗೇರಡ್ಕ ಸರ್ಕಾರಿ ಶಾಲಾ ಸೇವಾ ಟ್ರಸ್ಟ್ ನಾ ವಿದ್ಯಾನಿಧಿಗಾಗಿ ಆಯೋಜಿಸಿರುವ ಈ ಶಿಬಿರಕ್ಕೆ ವಿದ್ಯಾರ್ಥಿಗಳಿಂದ ರೂಪಾಯಿ 100,ಸಾರ್ವಜನಿಕರಿಂದ ರೂಪಾಯಿ 200 ನ್ನು ದೇಣಿಗೆ ರೂಪದಲ್ಲಿ ಪಡೆಯಲಾಗುವುದು. ಮೂರು ವಿಶ್ವ ದಾಖಲೆಯ ಪ್ರಯತ್ನ, ಮ್ಯಾರಥಾನ್ ಯೋಗ ಶಿಬಿರ ತರಬೇತಿಯ ಮೂಲಕ ಮೂರು ವಿಶ್ವ ದಾಖಲೆಯನ್ನು ಸಾರಿಸಲು ಪ್ರಯತ್ನಿಸಲಾಗುವುದು, ಒಂದೇ ಯೋಗ ಗುರು, ಒಂದೇ ವೇದಿಕೆಯಲ್ಲಿ ನಿರಂತರ 25 ಗಂಟೆ ಯೋಗ ತರಬೇತಿ ನೀಡುವುದು,

ಈ ತರಬೇತಿಯಲ್ಲಿ 2500 ಕ್ಕೂ ಮಿಕ್ಕಿ ವಿವಿಧ ವೈದ್ಯಕೀಯ ವಿದ್ಯಾರ್ಥಿಗಳು ತರಬೇತಿ ಒಳಗಾಗುವುದು,4000ಕ್ಕೂ ಮಿಕ್ಕಿ ಯೋಗ ಶಿಬಿರಾರ್ಥಿಗಳಿಗೆ ತರಬೇತಿ ಪಡೆಯಲಿದ್ದಾರೆಂದು ಯೋಗ ಗುರು ಕುಶಾಲಪ್ಪ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya

ಎಪ್ರಿಲ್ 30: ಹೊಕ್ಕಾಡಿಗೋಳಿ ಶ್ರೀಮತಿ ಜಿನ್ನಮ್ಮ ಮೂಲ್ಯರ ಉತ್ತರಕ್ರಿಯೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಸ್ಫೋಟ ಪ್ರಕರಣ: ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡದಿಂದ ಸ್ಥಳ ಮಹಜರು

Suddi Udaya

ದೇಗುಲದ ಪರಿಸರದಲ್ಲಿ ತಿರುಗಾಡುತ್ತಿದ್ದ ಒಂಟಿ ಮಹಿಳೆಯನ್ನು ಅವರ ಊರಿಗೆ ಕಳುಹಿಸಿ ಮಾನವೀಯತೆ ಮೆರೆದ ಪೋಲೀಸ್ ಇಲಾಖೆ ಹಾಗೂ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya
error: Content is protected !!