July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

ಬೆಳ್ತಂಗಡಿ : ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ವಿಶ್ವವಿದ್ಯಾಲಯ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಯೋಗದ ಜಾಗೃತಿ ಮೂಡಿಸಲು ಭವಿಷ್ಯದ ದುಃಖಗಳನ್ನು ದೂರ ಮಾಡಲು ಯೋಗ ಎಂಬ ಧ್ಯೇಯದೊಂದಿಗೆ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯು ಜುಲೈ 22 ಸೋಮವಾರ ದಿಂದ ಜುಲೈ 23 ಮಂಗಳವಾರ 10 ಗಂಟೆಯವರೆಗೆ 25 ಗಂಟೆಗಳ ನಿರಂತರ ಯೋಗ ತರಬೇತಿ ನಡೆಯಲಿದೆ.

ಯೋಗ ಗುರು ಕುಶಾಲಪ್ಪ ಗೌಡ ರವರು ತಲಾ ಒಂದೂವರೆ ಗಂಟೆಯ 17 ಬ್ಯಾಚ್ ಗಳಲ್ಲಿ ತರಬೇತಿ ನೀಡಲಿದ್ದು, ಭಾಗವಹಿಸುವ ಶಿಬಿರಾರ್ಥಿಗಳಿಗೆ ರೂಪಾಯಿ 500 ಮೌಲ್ಯದ ಯೋಗ ಪುಸ್ತಕ, ಯೋಗ ಬಟ್ಟೆ, ಯೋಗ ಕ್ಯಾಲೆಂಡರ್,ಯೋಗ ಪ್ರಮಾಣ ಪತ್ರ ಮತ್ತು ಉಪಹಾರ ನೀಡಲಾಗುವುದು, ಮುಗೇರಡ್ಕ ಸರ್ಕಾರಿ ಶಾಲಾ ಸೇವಾ ಟ್ರಸ್ಟ್ ನಾ ವಿದ್ಯಾನಿಧಿಗಾಗಿ ಆಯೋಜಿಸಿರುವ ಈ ಶಿಬಿರಕ್ಕೆ ವಿದ್ಯಾರ್ಥಿಗಳಿಂದ ರೂಪಾಯಿ 100,ಸಾರ್ವಜನಿಕರಿಂದ ರೂಪಾಯಿ 200 ನ್ನು ದೇಣಿಗೆ ರೂಪದಲ್ಲಿ ಪಡೆಯಲಾಗುವುದು. ಮೂರು ವಿಶ್ವ ದಾಖಲೆಯ ಪ್ರಯತ್ನ, ಮ್ಯಾರಥಾನ್ ಯೋಗ ಶಿಬಿರ ತರಬೇತಿಯ ಮೂಲಕ ಮೂರು ವಿಶ್ವ ದಾಖಲೆಯನ್ನು ಸಾರಿಸಲು ಪ್ರಯತ್ನಿಸಲಾಗುವುದು, ಒಂದೇ ಯೋಗ ಗುರು, ಒಂದೇ ವೇದಿಕೆಯಲ್ಲಿ ನಿರಂತರ 25 ಗಂಟೆ ಯೋಗ ತರಬೇತಿ ನೀಡುವುದು,

ಈ ತರಬೇತಿಯಲ್ಲಿ 2500 ಕ್ಕೂ ಮಿಕ್ಕಿ ವಿವಿಧ ವೈದ್ಯಕೀಯ ವಿದ್ಯಾರ್ಥಿಗಳು ತರಬೇತಿ ಒಳಗಾಗುವುದು,4000ಕ್ಕೂ ಮಿಕ್ಕಿ ಯೋಗ ಶಿಬಿರಾರ್ಥಿಗಳಿಗೆ ತರಬೇತಿ ಪಡೆಯಲಿದ್ದಾರೆಂದು ಯೋಗ ಗುರು ಕುಶಾಲಪ್ಪ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ಬೆಳ್ತಂಗಡಿ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ಲಾಯಿಲ : ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆವಿದ್ಯಾರ್ಥಿಗಳಿಂದ ಸಿ.ಸಿ. ಟಿ.ವಿ ಹಸ್ತಾಂತರ ಹಾಗೂ ವರ್ಗಾವಣೆಗೊಂಡ ಶಿಕ್ಷಕಿಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಬಂಟ ಸಮಾಜ ಬಾಂಧವರು ಜಾತಿ ಕಾಲಂನಲ್ಲಿ ಬಂಟ, ಪರ್ಯಾಯ ಹೆಸರು ನಾಡವ ಎಂದು ನಮೂದಿಸುವಂತೆ ಬಂಟ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಹೇಳಿಕೆ

Suddi Udaya

ಲಾಯಿಲ: ಪಡ್ಲಾಡಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ: ಅಧ್ಯಕ್ಷರಾಗಿ ವಿನಯ್ ಎಂ.ಎಸ್. : ಕಾರ್ಯದರ್ಶಿಯಾಗಿ ದಿನಕರ್ ದೇವೊಟ್ಟು

Suddi Udaya
error: Content is protected !!