ತೆಂಕಕಾರಂದೂರು: ರಸ್ತೆಯ ಬದಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ

Suddi Udaya

ಬೆಳ್ತಂಗಡಿ: ಗುರುವಾಯನಕೆರೆ ಕಡೆಯಿಂದ ನಾರಾವಿ ಕಡೆಗೆ ಬರುತ್ತಿದ್ದ ಕಾರು ರಸ್ತೆಯ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಜು.14ರಂದು ರಾತ್ರಿ ನಡೆದಿದೆ.

ತೆಂಕಕಾರಂದೂರು ನಿವಾಸಿ ಪೂರ್ಣೆಶ್(32), ರವರ ದೂರಿನಂತೆ, ಜು 14 ರಂದು ರಾತ್ರಿ, ತೆಂಕಕಾರಂದೂರು ಗ್ರಾಮದ ಆಲಡ್ಕ ಎಂಬಲ್ಲಿ, ಗುರುವಾಯನಕೆರೆ ಕಡೆಯಿಂದ ನಾರಾವಿ ಕಡೆಗೆ ಕಾರೊಂದನ್ನು ಅದರ ಚಾಲಕನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿ, ರಸ್ತೆಯ ಬದಿಯಲ್ಲಿ ನಿಂತಿದ್ದ ಧರ್ಣಪ್ಪ ಪೂಜಾರಿ ಎಂಬವರಿಗೆ ಡಿಕ್ಕಿ ಹೊಡೆಸಿ, ನಿಲ್ಲಿಸದೇ ಪರಾರಿಯಾಗಿರುತ್ತಾರೆ.

ಡಿಕ್ಕಿ ಹೊಡೆದ ಪರಿಣಾಮ ಧರ್ಣಪ್ಪ ಪೂಜಾರಿಯವರ ತಲೆಗೆ ಗಂಭೀರ ಸ್ವರೂಪದ ರಕ್ತಗಾಯವಾಗಿದ್ದು, ಗಾಯಾಳು ಧರ್ಣಪ್ಪ ಪೂಜಾರಿಯವರು ಮಂಗಳೂರು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವುದಾಗಿ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 61/2024 ಕಲಂ : 281, 125(B) BNS-2023 ಮತ್ತು ಕಲಂ 134 ( a & b) IMV Act ರಂತೆ ಪ್ರಕರಣ ದಾಖಲಾಗಿರುತ್ತದೆ.

Leave a Comment

error: Content is protected !!