25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತವರದಿ

ತೆಂಕಕಾರಂದೂರು: ರಸ್ತೆಯ ಬದಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ

ಬೆಳ್ತಂಗಡಿ: ಗುರುವಾಯನಕೆರೆ ಕಡೆಯಿಂದ ನಾರಾವಿ ಕಡೆಗೆ ಬರುತ್ತಿದ್ದ ಕಾರು ರಸ್ತೆಯ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಜು.14ರಂದು ರಾತ್ರಿ ನಡೆದಿದೆ.

ತೆಂಕಕಾರಂದೂರು ನಿವಾಸಿ ಪೂರ್ಣೆಶ್(32), ರವರ ದೂರಿನಂತೆ, ಜು 14 ರಂದು ರಾತ್ರಿ, ತೆಂಕಕಾರಂದೂರು ಗ್ರಾಮದ ಆಲಡ್ಕ ಎಂಬಲ್ಲಿ, ಗುರುವಾಯನಕೆರೆ ಕಡೆಯಿಂದ ನಾರಾವಿ ಕಡೆಗೆ ಕಾರೊಂದನ್ನು ಅದರ ಚಾಲಕನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿ, ರಸ್ತೆಯ ಬದಿಯಲ್ಲಿ ನಿಂತಿದ್ದ ಧರ್ಣಪ್ಪ ಪೂಜಾರಿ ಎಂಬವರಿಗೆ ಡಿಕ್ಕಿ ಹೊಡೆಸಿ, ನಿಲ್ಲಿಸದೇ ಪರಾರಿಯಾಗಿರುತ್ತಾರೆ.

ಡಿಕ್ಕಿ ಹೊಡೆದ ಪರಿಣಾಮ ಧರ್ಣಪ್ಪ ಪೂಜಾರಿಯವರ ತಲೆಗೆ ಗಂಭೀರ ಸ್ವರೂಪದ ರಕ್ತಗಾಯವಾಗಿದ್ದು, ಗಾಯಾಳು ಧರ್ಣಪ್ಪ ಪೂಜಾರಿಯವರು ಮಂಗಳೂರು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವುದಾಗಿ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 61/2024 ಕಲಂ : 281, 125(B) BNS-2023 ಮತ್ತು ಕಲಂ 134 ( a & b) IMV Act ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಇಂದಿನಿಂದ ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿಯಲ್ಲಿ ಬಟ್ಟೆಗಳ ಮಾರಾಟ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಧರೆ ಕುಸಿತ : ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya
error: Content is protected !!