22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತವರದಿ

ತೆಂಕಕಾರಂದೂರು: ರಸ್ತೆಯ ಬದಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ

ಬೆಳ್ತಂಗಡಿ: ಗುರುವಾಯನಕೆರೆ ಕಡೆಯಿಂದ ನಾರಾವಿ ಕಡೆಗೆ ಬರುತ್ತಿದ್ದ ಕಾರು ರಸ್ತೆಯ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಜು.14ರಂದು ರಾತ್ರಿ ನಡೆದಿದೆ.

ತೆಂಕಕಾರಂದೂರು ನಿವಾಸಿ ಪೂರ್ಣೆಶ್(32), ರವರ ದೂರಿನಂತೆ, ಜು 14 ರಂದು ರಾತ್ರಿ, ತೆಂಕಕಾರಂದೂರು ಗ್ರಾಮದ ಆಲಡ್ಕ ಎಂಬಲ್ಲಿ, ಗುರುವಾಯನಕೆರೆ ಕಡೆಯಿಂದ ನಾರಾವಿ ಕಡೆಗೆ ಕಾರೊಂದನ್ನು ಅದರ ಚಾಲಕನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿ, ರಸ್ತೆಯ ಬದಿಯಲ್ಲಿ ನಿಂತಿದ್ದ ಧರ್ಣಪ್ಪ ಪೂಜಾರಿ ಎಂಬವರಿಗೆ ಡಿಕ್ಕಿ ಹೊಡೆಸಿ, ನಿಲ್ಲಿಸದೇ ಪರಾರಿಯಾಗಿರುತ್ತಾರೆ.

ಡಿಕ್ಕಿ ಹೊಡೆದ ಪರಿಣಾಮ ಧರ್ಣಪ್ಪ ಪೂಜಾರಿಯವರ ತಲೆಗೆ ಗಂಭೀರ ಸ್ವರೂಪದ ರಕ್ತಗಾಯವಾಗಿದ್ದು, ಗಾಯಾಳು ಧರ್ಣಪ್ಪ ಪೂಜಾರಿಯವರು ಮಂಗಳೂರು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವುದಾಗಿ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 61/2024 ಕಲಂ : 281, 125(B) BNS-2023 ಮತ್ತು ಕಲಂ 134 ( a & b) IMV Act ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಾಸಭೆ

Suddi Udaya

ಬೈಕ್ ಹಾಗೂ ಸ್ವಿಫ್ಟ್ ಕಾರು ನಡುವೆ ಭೀಕರ ಅಪಘಾತ : ಬೈಕ್‌ ಸವಾರ ಸಾವು

Suddi Udaya

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

Suddi Udaya

ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಜು.1ರಿಂದ ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ: ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ ಹಾಗೂ ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ,

Suddi Udaya
error: Content is protected !!