24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭ

ಉಜಿರೆ: ‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭವು ಉಜಿರೆಯ ರುಡ್ ಸೆಟ್ ಸಂಸ್ಥೆಯ ಸಭಾಂಗಣದಲ್ಲಿ ಜು.14ರಂದು ಜರಗಿತು.

ರುಡ್ ಸೆಟ್ ಸಂಸ್ಥೆಗಳ ಕೇಂದ್ರ ಕಛೇರಿಗೆ ನಿಯೋಜನೆಗೊಂಡ ಕಾರ್ಯನಿರ್ವಾಹಕ ನಿರ್ದೇಶಕ ವಿಜಯ್ ಕುಮಾರ್, ಉಜಿರೆ ರುಡ್ ಸಂಸ್ಥೆಗೆ ನಿಯೋಜನೆಗೊಂಡ ನಿರ್ದೇಶಕ ಅಜಯ್ ಕುಮಾರ್, ಉಜಿರೆ ರುಡ್ ಸೆಟ್ ಸಂಸ್ಥೆಗೆ ನಿಯೋಜನೆಗೊಂಡ ಉಪನ್ಯಾಸಕ ಕರುಣಾಕರ್ ಜೈನ್, ಕೇಂದ್ರ ಕಛೇರಿಗೆ ನಿಯೋಜನೆಗೊಂಡ ಅನಸೂಯ ರೈ ಹಾಗೂ ಲೋಹಿತ್ ಕುಮಾರ್ ಜೈನ್ ಇವರನ್ನು ಗೌರವಿಸಲಾಯಿತು.

ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರು ಉದ್ಯಮದಲ್ಲಿನ ಅಭಿವೃದ್ಧಿಗೆ ಪೂರಕವಾಗುವ ಬ್ಯಾಂಕಿಂಗ್ ಸೇವೆಗಳ ಬಗ್ಗೆ ಸಲಹೆ ನೀಡಿದರು.

ಆನಂದ್ ಕನ್ಯಾಡಿ ಇವರು ಆಟಿ ಆಚರಣೆಗಳ ಬಗ್ಗೆ ಮಾಹಿತಿ ನೀಡಿದರು. ಸುಮಾರು ಹತ್ತು ಬಗೆಯ ಆಟಿ ತಿಂಗಳ ತಿನಸುಗಳನ್ನು ಸದಸ್ಯರು ಮನೆಯಲ್ಲಿಯೇ ತಯಾರಿಸಿ ತಂದಿದ್ದರು.

ಹಿರಿಯ ಉಪನ್ಯಾಸಕ ಅಬ್ರಾಹಂ ಜೇಮ್ಸ್ ಪ್ರಸ್ತಾವನೆಗೈದರು. ‘ಆಸರೆ’ ಸಂಘದ ಅಧ್ಯಕ್ಷ ಪ್ರಶಾಂತ್ ಕುದ್ಯಾಡಿ ಸ್ವಾಗತಿಸಿದರು. ಮಾಧವಿ ರೈ ವಂದಿಸಿ, ಗೌತಮ್ ಕುಕ್ಯಾನ್ ನಿರೂಪಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಇಂದಿನಿಂದ ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿಯಲ್ಲಿ ಬಟ್ಟೆಗಳ ಮಾರಾಟ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜಯದಶಮಿಯ ವಿಶೇಷ ಪೂಜೆ ಹಾಗೂ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ ಸಭೆ

Suddi Udaya

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ

Suddi Udaya
error: Content is protected !!