32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭ

ಉಜಿರೆ: ‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭವು ಉಜಿರೆಯ ರುಡ್ ಸೆಟ್ ಸಂಸ್ಥೆಯ ಸಭಾಂಗಣದಲ್ಲಿ ಜು.14ರಂದು ಜರಗಿತು.

ರುಡ್ ಸೆಟ್ ಸಂಸ್ಥೆಗಳ ಕೇಂದ್ರ ಕಛೇರಿಗೆ ನಿಯೋಜನೆಗೊಂಡ ಕಾರ್ಯನಿರ್ವಾಹಕ ನಿರ್ದೇಶಕ ವಿಜಯ್ ಕುಮಾರ್, ಉಜಿರೆ ರುಡ್ ಸಂಸ್ಥೆಗೆ ನಿಯೋಜನೆಗೊಂಡ ನಿರ್ದೇಶಕ ಅಜಯ್ ಕುಮಾರ್, ಉಜಿರೆ ರುಡ್ ಸೆಟ್ ಸಂಸ್ಥೆಗೆ ನಿಯೋಜನೆಗೊಂಡ ಉಪನ್ಯಾಸಕ ಕರುಣಾಕರ್ ಜೈನ್, ಕೇಂದ್ರ ಕಛೇರಿಗೆ ನಿಯೋಜನೆಗೊಂಡ ಅನಸೂಯ ರೈ ಹಾಗೂ ಲೋಹಿತ್ ಕುಮಾರ್ ಜೈನ್ ಇವರನ್ನು ಗೌರವಿಸಲಾಯಿತು.

ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರು ಉದ್ಯಮದಲ್ಲಿನ ಅಭಿವೃದ್ಧಿಗೆ ಪೂರಕವಾಗುವ ಬ್ಯಾಂಕಿಂಗ್ ಸೇವೆಗಳ ಬಗ್ಗೆ ಸಲಹೆ ನೀಡಿದರು.

ಆನಂದ್ ಕನ್ಯಾಡಿ ಇವರು ಆಟಿ ಆಚರಣೆಗಳ ಬಗ್ಗೆ ಮಾಹಿತಿ ನೀಡಿದರು. ಸುಮಾರು ಹತ್ತು ಬಗೆಯ ಆಟಿ ತಿಂಗಳ ತಿನಸುಗಳನ್ನು ಸದಸ್ಯರು ಮನೆಯಲ್ಲಿಯೇ ತಯಾರಿಸಿ ತಂದಿದ್ದರು.

ಹಿರಿಯ ಉಪನ್ಯಾಸಕ ಅಬ್ರಾಹಂ ಜೇಮ್ಸ್ ಪ್ರಸ್ತಾವನೆಗೈದರು. ‘ಆಸರೆ’ ಸಂಘದ ಅಧ್ಯಕ್ಷ ಪ್ರಶಾಂತ್ ಕುದ್ಯಾಡಿ ಸ್ವಾಗತಿಸಿದರು. ಮಾಧವಿ ರೈ ವಂದಿಸಿ, ಗೌತಮ್ ಕುಕ್ಯಾನ್ ನಿರೂಪಿಸಿದರು.

Related posts

ಶಿಬಾಜೆ: ಭಂಡಿಹೊಳೆಯಲ್ಲಿ ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದಿಂದ ರಸ್ತೆ ದುರಸ್ತಿ

Suddi Udaya

ಕಳಿಯ ಗ್ರಾ.ಪಂ. ಗ್ರಾಮ ಸಭೆ : ಲೋಕೋಪಯೋಗಿ ಇಲಾಖೆಯವರು ಬರುವ ತನಕ ನಿಲ್ಲುತೇವೆ: ಕೇಶವ ಪೂಜಾರಿ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ಆಟಿಕೋಲ: ನೂರಾರು ಭಕ್ತರಿಂದ ಶ್ರೀ ದೈವದ ದರ್ಶನ, ವಿಶೇಷ ಸೇವೆ

Suddi Udaya

ನೂಜೋಡಿ ಮನೆಗೆ ಕಾಂಗ್ರೇಸ್ ಮುಖಂಡ ಪದ್ಮರಾಜ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

Suddi Udaya

ಬೆಳ್ತಂಗಡಿ: ಉಪನ್ಯಾಸಕ ಪುನೀತ್ ಕುಮಾರ್ ಬಯಲು ಅವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ಪುರುಷರ ತಂಡ ಪ್ರಥಮ ಹಾಗೂ ಮಹಿಳೆಯರ ತಂಡ ದ್ವಿತೀಯ

Suddi Udaya
error: Content is protected !!