March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭ

ಉಜಿರೆ: ‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭವು ಉಜಿರೆಯ ರುಡ್ ಸೆಟ್ ಸಂಸ್ಥೆಯ ಸಭಾಂಗಣದಲ್ಲಿ ಜು.14ರಂದು ಜರಗಿತು.

ರುಡ್ ಸೆಟ್ ಸಂಸ್ಥೆಗಳ ಕೇಂದ್ರ ಕಛೇರಿಗೆ ನಿಯೋಜನೆಗೊಂಡ ಕಾರ್ಯನಿರ್ವಾಹಕ ನಿರ್ದೇಶಕ ವಿಜಯ್ ಕುಮಾರ್, ಉಜಿರೆ ರುಡ್ ಸಂಸ್ಥೆಗೆ ನಿಯೋಜನೆಗೊಂಡ ನಿರ್ದೇಶಕ ಅಜಯ್ ಕುಮಾರ್, ಉಜಿರೆ ರುಡ್ ಸೆಟ್ ಸಂಸ್ಥೆಗೆ ನಿಯೋಜನೆಗೊಂಡ ಉಪನ್ಯಾಸಕ ಕರುಣಾಕರ್ ಜೈನ್, ಕೇಂದ್ರ ಕಛೇರಿಗೆ ನಿಯೋಜನೆಗೊಂಡ ಅನಸೂಯ ರೈ ಹಾಗೂ ಲೋಹಿತ್ ಕುಮಾರ್ ಜೈನ್ ಇವರನ್ನು ಗೌರವಿಸಲಾಯಿತು.

ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರು ಉದ್ಯಮದಲ್ಲಿನ ಅಭಿವೃದ್ಧಿಗೆ ಪೂರಕವಾಗುವ ಬ್ಯಾಂಕಿಂಗ್ ಸೇವೆಗಳ ಬಗ್ಗೆ ಸಲಹೆ ನೀಡಿದರು.

ಆನಂದ್ ಕನ್ಯಾಡಿ ಇವರು ಆಟಿ ಆಚರಣೆಗಳ ಬಗ್ಗೆ ಮಾಹಿತಿ ನೀಡಿದರು. ಸುಮಾರು ಹತ್ತು ಬಗೆಯ ಆಟಿ ತಿಂಗಳ ತಿನಸುಗಳನ್ನು ಸದಸ್ಯರು ಮನೆಯಲ್ಲಿಯೇ ತಯಾರಿಸಿ ತಂದಿದ್ದರು.

ಹಿರಿಯ ಉಪನ್ಯಾಸಕ ಅಬ್ರಾಹಂ ಜೇಮ್ಸ್ ಪ್ರಸ್ತಾವನೆಗೈದರು. ‘ಆಸರೆ’ ಸಂಘದ ಅಧ್ಯಕ್ಷ ಪ್ರಶಾಂತ್ ಕುದ್ಯಾಡಿ ಸ್ವಾಗತಿಸಿದರು. ಮಾಧವಿ ರೈ ವಂದಿಸಿ, ಗೌತಮ್ ಕುಕ್ಯಾನ್ ನಿರೂಪಿಸಿದರು.

Related posts

ತೋಟತ್ತಾಡಿ: ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ನಿಧನ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya

ಕಕ್ಯಪದವು ಎಲ್‌.ಸಿ.ಆರ್ ಇಂಡಿಯನ್ ಪ.ಪೂ. ಕಾಲೇಜು ವಾಣಿಜ್ಯ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲು

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

Suddi Udaya

ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಪೂಜೆ: ಫೆ.9 ರಿಂದ 12 ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!