25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭ

ಉಜಿರೆ: ‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭವು ಉಜಿರೆಯ ರುಡ್ ಸೆಟ್ ಸಂಸ್ಥೆಯ ಸಭಾಂಗಣದಲ್ಲಿ ಜು.14ರಂದು ಜರಗಿತು.

ರುಡ್ ಸೆಟ್ ಸಂಸ್ಥೆಗಳ ಕೇಂದ್ರ ಕಛೇರಿಗೆ ನಿಯೋಜನೆಗೊಂಡ ಕಾರ್ಯನಿರ್ವಾಹಕ ನಿರ್ದೇಶಕ ವಿಜಯ್ ಕುಮಾರ್, ಉಜಿರೆ ರುಡ್ ಸಂಸ್ಥೆಗೆ ನಿಯೋಜನೆಗೊಂಡ ನಿರ್ದೇಶಕ ಅಜಯ್ ಕುಮಾರ್, ಉಜಿರೆ ರುಡ್ ಸೆಟ್ ಸಂಸ್ಥೆಗೆ ನಿಯೋಜನೆಗೊಂಡ ಉಪನ್ಯಾಸಕ ಕರುಣಾಕರ್ ಜೈನ್, ಕೇಂದ್ರ ಕಛೇರಿಗೆ ನಿಯೋಜನೆಗೊಂಡ ಅನಸೂಯ ರೈ ಹಾಗೂ ಲೋಹಿತ್ ಕುಮಾರ್ ಜೈನ್ ಇವರನ್ನು ಗೌರವಿಸಲಾಯಿತು.

ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರು ಉದ್ಯಮದಲ್ಲಿನ ಅಭಿವೃದ್ಧಿಗೆ ಪೂರಕವಾಗುವ ಬ್ಯಾಂಕಿಂಗ್ ಸೇವೆಗಳ ಬಗ್ಗೆ ಸಲಹೆ ನೀಡಿದರು.

ಆನಂದ್ ಕನ್ಯಾಡಿ ಇವರು ಆಟಿ ಆಚರಣೆಗಳ ಬಗ್ಗೆ ಮಾಹಿತಿ ನೀಡಿದರು. ಸುಮಾರು ಹತ್ತು ಬಗೆಯ ಆಟಿ ತಿಂಗಳ ತಿನಸುಗಳನ್ನು ಸದಸ್ಯರು ಮನೆಯಲ್ಲಿಯೇ ತಯಾರಿಸಿ ತಂದಿದ್ದರು.

ಹಿರಿಯ ಉಪನ್ಯಾಸಕ ಅಬ್ರಾಹಂ ಜೇಮ್ಸ್ ಪ್ರಸ್ತಾವನೆಗೈದರು. ‘ಆಸರೆ’ ಸಂಘದ ಅಧ್ಯಕ್ಷ ಪ್ರಶಾಂತ್ ಕುದ್ಯಾಡಿ ಸ್ವಾಗತಿಸಿದರು. ಮಾಧವಿ ರೈ ವಂದಿಸಿ, ಗೌತಮ್ ಕುಕ್ಯಾನ್ ನಿರೂಪಿಸಿದರು.

Related posts

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಳೆಂಜ: ಅತಂತ್ರರಾದ ರಾಮಣ್ಣ ನಿಂತಿಕಲ್ಲು ಇವರಿಗೆ ತಾತ್ಕಾಲಿಕ ಮನೆ ನಿರ್ಮಾಣ

Suddi Udaya

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಬಸದಿಯಲ್ಲಿ 12ನೇ ವಾರ್ಷಿಕೋತ್ಸವ, ಲಘುಸಿದ್ಧಚಕ್ರ ಯಂತ್ರಾರಾಧನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿವೃತ್ತರಾದ ಡಾ| ಎಲ್.ಹೆಚ್ ಮಂಜುನಾಥ್ ಅವರಿಗೆ ಸನ್ಮಾನ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿಗೆ ವಿದ್ಯುತ್ ಸಂಪರ್ಕ ಅಳವಡಿಕೆ

Suddi Udaya
error: Content is protected !!