22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭ

ಉಜಿರೆ: ‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭವು ಉಜಿರೆಯ ರುಡ್ ಸೆಟ್ ಸಂಸ್ಥೆಯ ಸಭಾಂಗಣದಲ್ಲಿ ಜು.14ರಂದು ಜರಗಿತು.

ರುಡ್ ಸೆಟ್ ಸಂಸ್ಥೆಗಳ ಕೇಂದ್ರ ಕಛೇರಿಗೆ ನಿಯೋಜನೆಗೊಂಡ ಕಾರ್ಯನಿರ್ವಾಹಕ ನಿರ್ದೇಶಕ ವಿಜಯ್ ಕುಮಾರ್, ಉಜಿರೆ ರುಡ್ ಸಂಸ್ಥೆಗೆ ನಿಯೋಜನೆಗೊಂಡ ನಿರ್ದೇಶಕ ಅಜಯ್ ಕುಮಾರ್, ಉಜಿರೆ ರುಡ್ ಸೆಟ್ ಸಂಸ್ಥೆಗೆ ನಿಯೋಜನೆಗೊಂಡ ಉಪನ್ಯಾಸಕ ಕರುಣಾಕರ್ ಜೈನ್, ಕೇಂದ್ರ ಕಛೇರಿಗೆ ನಿಯೋಜನೆಗೊಂಡ ಅನಸೂಯ ರೈ ಹಾಗೂ ಲೋಹಿತ್ ಕುಮಾರ್ ಜೈನ್ ಇವರನ್ನು ಗೌರವಿಸಲಾಯಿತು.

ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರು ಉದ್ಯಮದಲ್ಲಿನ ಅಭಿವೃದ್ಧಿಗೆ ಪೂರಕವಾಗುವ ಬ್ಯಾಂಕಿಂಗ್ ಸೇವೆಗಳ ಬಗ್ಗೆ ಸಲಹೆ ನೀಡಿದರು.

ಆನಂದ್ ಕನ್ಯಾಡಿ ಇವರು ಆಟಿ ಆಚರಣೆಗಳ ಬಗ್ಗೆ ಮಾಹಿತಿ ನೀಡಿದರು. ಸುಮಾರು ಹತ್ತು ಬಗೆಯ ಆಟಿ ತಿಂಗಳ ತಿನಸುಗಳನ್ನು ಸದಸ್ಯರು ಮನೆಯಲ್ಲಿಯೇ ತಯಾರಿಸಿ ತಂದಿದ್ದರು.

ಹಿರಿಯ ಉಪನ್ಯಾಸಕ ಅಬ್ರಾಹಂ ಜೇಮ್ಸ್ ಪ್ರಸ್ತಾವನೆಗೈದರು. ‘ಆಸರೆ’ ಸಂಘದ ಅಧ್ಯಕ್ಷ ಪ್ರಶಾಂತ್ ಕುದ್ಯಾಡಿ ಸ್ವಾಗತಿಸಿದರು. ಮಾಧವಿ ರೈ ವಂದಿಸಿ, ಗೌತಮ್ ಕುಕ್ಯಾನ್ ನಿರೂಪಿಸಿದರು.

Related posts

ಮಚ್ಚಿನ : ಬಳ್ಳಮಂಜ ಗಣೇಶ್ ಬಾಳಿಗ ನಿಧನ

Suddi Udaya

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya

ಭಾರೀ ಮಳೆ ಹಿನ್ನೆಲೆ: ಬೆಳ್ತಂಗಡಿಯ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿಷೇಧ

Suddi Udaya

ಬಂದಾರು : ಪೆರ್ಲ -ಬೈಪಾಡಿಯಲ್ಲಿ ನೂತನ ಶಾಖಾ ಅಂಚೆ ಕಚೇರಿ ಉದ್ಘಾಟನೆ

Suddi Udaya

ನೈನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ವತಿಯಿಂದ ಪುಸ್ತಕ ವಿತರಣೆ, ಅನಾರೋಗ್ಯ ಪೀಡಿತರಿಗೆ ಸಹಾಯಧನ ಹಾಗೂ ಉನ್ನತ ಶಿಕ್ಷಣಕ್ಕೆ ಸಹಾಯಧನ ವಿತರಣೆ

Suddi Udaya

ಜೂ.30ರಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಅಭಿಯಾನ ಆರಂಭ

Suddi Udaya
error: Content is protected !!