23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

ಬೆಳ್ತಂಗಡಿ: ಪ್ರವಾಸಕ್ಕೆ ಬಂದು ಹಳ್ಳಿ ರಸ್ತೆಯಲ್ಲಿ ವೀಲಿಂಗ್ ಮಾಡಿ ಸುಮಾರು ಐದು ಕಿಲೋ ಮೀಟರ್ ರಸ್ತೆಯನ್ನು ಹಾಳು ಮಾಡಿರುವ ಬೆಳ್ತಂಗಡಿಯ ಉಜಿರೆ ಮೂಲದ ಐವರು ಯುವಕರ ವಿರುದ್ದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ನಿವಾಸಿಗಳಾದ ಗಿರೀಶ್, ಗಣೇಶ್, ಗಣೇಶ್ ಕುಮಾರ್, ಪ್ರವೀಣ್ ಹಾಗೂ ರೋಹಿತ್ ಬಂಧಿತ ಆರೋಪಿಗಳು. ರಸ್ತೆಯಲ್ಲಿ ವೀಲಿಂಗ್ ಮಾಡಿದ್ದ 5 ಬೈಕುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕರ್ಕಶ ಶಬ್ದದೊಂದಿಗೆ ಓಡಾಟ ಹಾಗೂ ಸಾರ್ವಜನಿಕ ರಸ್ತೆಯನ್ನು ಹಾಳು ಮಾಡಿದ ಹಿನ್ನೆಲೆ ಐವರ ವಿರುದ್ಧವು ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರಾಂತ್ಯದ ಹಿನ್ನೆಲೆ ಜು.14ರಂದು ಮೂಡಿಗೆರೆ ತಾಲೂಕಿನ ಸುಪ್ರಸಿದ್ದ ಪ್ರವಾಸಿತಾಣ ರಾಣಿ ಝರಿ ಜಲಪಾತಕ್ಕೆ ಬಂದಿದ್ದ ಐವರು ಸ್ನೇಹಿತರು ರೀಲ್ಸ್ ಮಾಡುವ ಹುಚ್ಚಿಗೆ ಹಳ್ಳಿಯ ರಸ್ತೆಯನ್ನು ಸಂಪೂರ್ಣ ಹಾಳು ಮಾಡಿದ್ದರು. ಇದರಿಂದ ರಾಣಿಝರಿಯ ಮಣ್ಣಿನ ರಸ್ತೆ ಕೆಸರು ಗದ್ದೆಯಾಗಿತ್ತು., ಅರ್ಧಗಂಟೆಗೂ ಹೆಚ್ಚು ಕಾಲ ಯುವಕರು ಹುಚ್ಚಾಟ ನಡೆಸಿದರೂ ಸಹ ಹೇಳೋರಿಲ್ಲ, ಕೇಳೋರಿಲ್ಲ ಎಂಬಾಂತಾಗಿತ್ತು.

Related posts

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

Suddi Udaya

ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

Suddi Udaya

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್

Suddi Udaya

ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಪ್ರದೀಶ್ ಮರೋಡಿ ಆಯ್ಕೆ

Suddi Udaya

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

Suddi Udaya
error: Content is protected !!