September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

ಬೆಳ್ತಂಗಡಿ: ಪ್ರವಾಸಕ್ಕೆ ಬಂದು ಹಳ್ಳಿ ರಸ್ತೆಯಲ್ಲಿ ವೀಲಿಂಗ್ ಮಾಡಿ ಸುಮಾರು ಐದು ಕಿಲೋ ಮೀಟರ್ ರಸ್ತೆಯನ್ನು ಹಾಳು ಮಾಡಿರುವ ಬೆಳ್ತಂಗಡಿಯ ಉಜಿರೆ ಮೂಲದ ಐವರು ಯುವಕರ ವಿರುದ್ದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ನಿವಾಸಿಗಳಾದ ಗಿರೀಶ್, ಗಣೇಶ್, ಗಣೇಶ್ ಕುಮಾರ್, ಪ್ರವೀಣ್ ಹಾಗೂ ರೋಹಿತ್ ಬಂಧಿತ ಆರೋಪಿಗಳು. ರಸ್ತೆಯಲ್ಲಿ ವೀಲಿಂಗ್ ಮಾಡಿದ್ದ 5 ಬೈಕುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕರ್ಕಶ ಶಬ್ದದೊಂದಿಗೆ ಓಡಾಟ ಹಾಗೂ ಸಾರ್ವಜನಿಕ ರಸ್ತೆಯನ್ನು ಹಾಳು ಮಾಡಿದ ಹಿನ್ನೆಲೆ ಐವರ ವಿರುದ್ಧವು ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರಾಂತ್ಯದ ಹಿನ್ನೆಲೆ ಜು.14ರಂದು ಮೂಡಿಗೆರೆ ತಾಲೂಕಿನ ಸುಪ್ರಸಿದ್ದ ಪ್ರವಾಸಿತಾಣ ರಾಣಿ ಝರಿ ಜಲಪಾತಕ್ಕೆ ಬಂದಿದ್ದ ಐವರು ಸ್ನೇಹಿತರು ರೀಲ್ಸ್ ಮಾಡುವ ಹುಚ್ಚಿಗೆ ಹಳ್ಳಿಯ ರಸ್ತೆಯನ್ನು ಸಂಪೂರ್ಣ ಹಾಳು ಮಾಡಿದ್ದರು. ಇದರಿಂದ ರಾಣಿಝರಿಯ ಮಣ್ಣಿನ ರಸ್ತೆ ಕೆಸರು ಗದ್ದೆಯಾಗಿತ್ತು., ಅರ್ಧಗಂಟೆಗೂ ಹೆಚ್ಚು ಕಾಲ ಯುವಕರು ಹುಚ್ಚಾಟ ನಡೆಸಿದರೂ ಸಹ ಹೇಳೋರಿಲ್ಲ, ಕೇಳೋರಿಲ್ಲ ಎಂಬಾಂತಾಗಿತ್ತು.

Related posts

ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಉಜಿರೆ ಜೆಸಿಐ ಸಿಟಿಗೆ ಹೊಸ ಘಟಕ ಔಟ್ ಸ್ಟ್ಯಾಂಡಿಂಗ್ ವಿನ್ನರ್ ಅವಾರ್ಡ್ ನೊಂದಿಗೆ ಹಲವು ಮನ್ನಣೆಗಳು

Suddi Udaya

ಕರ್ನಾಟಕ ಸೀರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್ ವತಿಯಿಂದ ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಕೋರಿ ಜನಾಂದೋಲನ ಪ್ರತಿಭಟನೆ

Suddi Udaya

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ:ರಬ್ಬರ್ ಕೃಷಿ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಉಜಿರೆಯ ಎಸ್.ಡಿ.ಎಂ ಕಾಲೇಜಿನ ಅಮಿತ್‌ ಕೆ ಜೈನ್ ಅವರಿಗೆ ಪಿ.ಎಚ್.ಡಿ ಪದವಿ

Suddi Udaya
error: Content is protected !!