23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

ಕಲ್ಲೇರಿ : ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಕಲ್ಲೇರಿಯಲ್ಲಿ ನೂತನವಾಗಿ ಪ್ರಾರಂಭಗೊಂಡ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಶ್ರೀದೇವಿ ಅಣವು ಕಾಂಪ್ಲೆಕ್ಸ್ ಕಲ್ಲೇರಿಯಲ್ಲಿ ಜು. 14 ರಂದು ಶುಭಾರಂಭಗೊಂಡಿತು.

ಸಮಾರಂಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಪಾಲ್ಗೊಂಡು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ತಣ್ಣೀರುಪoತ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ ಎಂ, ಬೆಳ್ತಂಗಡಿ ತಾಲೂಕು ಆರೋಗ್ಯಧಿಕಾರಿ ಡಾ.ಸೌಜನ್ಯ, ಉಪ್ಪಿನಂಗಡಿ ಸಮುದಾಯ ಅರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ. ಕೃಷ್ಣಾನoದ ಕೆ, ತಣ್ಣೀರುಪoತ ಸಿ.ಏ. ಬ್ಯಾಂಕ್ ಅಧ್ಯಕ್ಷರಾದ ಜಗದೀಶ್ ಶೆಟ್ಟಿ, ಪದ್ಮುಂಜ ಸಿ. ಏ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ತಣ್ಣೀರುಪoತ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಯವಿಕ್ರಂ, ತಣ್ಣೀರುಪoತ ಗ್ರಾಮ ಪಂಚಾಯತ್ ಸದಸ್ಯರಾದ ಸಾಮ್ರಾಟ್, ಪ್ರಧಾನ ಮಂತ್ರಿ ಜನೌಷಧಿ ಪರಿಯೋಜನೆಯ ಮಾಜಿ ನೋಡಲ್ ಅಧಿಕಾರಿ ಡಾ. ಅನಿಲ್ ದೀಪಕ್ ಶೆಟ್ಟಿ, ತಣ್ಣೀರುಪoತ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಜಯರಾಜ್ ಹೆಗ್ಡೆ ಪುತ್ತಿಲ ಗುತ್ತು, ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಪುರುಷೋತ್ತಮ ಗೌಡ ಮುಗೆರೋಡಿ, ಉಪ್ಪಿನಂಗಡಿ ವೇದಶಂಕರ ನಗರ ಶ್ರೀರಾಮ ಶಾಲೆಯ ಅಧ್ಯಕ್ಷರಾದ ಸುನಿಲ್ ಗೌಡ ಅಣವು ಉಪಸ್ಥಿತರಿದ್ದರು.


ಮಾಲಕರಾದ ವಿದ್ಯಾಧರ ಜೈನ್ ಪದ್ಮವಿದ್ಯಾ ಉಪ್ಪಿನಂಗಡಿ ಮತ್ತು ಮನೆಯವರು ಬಂದoತಹ ಅತಿಥಿ ಅಭ್ಯಾಗತರನ್ನು ಉಪಚರಿಸಿ, ಸತ್ಕರಿಸಿದರು. ಕಡಿಮೆ ಬೆಲೆಯಲ್ಲಿ ಎಲ್ಲಾ ಔಷಧಿಗಳು ಲಭ್ಯವಿದೆ ಇದರ ಪ್ರಯೋಜನ ಪಡೆದುಕೊಳ್ಳಬೇಕಾಗಿ ಮಾಲಕರು ತಿಳಿಸಿದರು.

Related posts

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya

ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ: ಕೊಲ್ಲಿ ದುರ್ಗಾಪರಮೇಶ್ವರಿಯ ಸೊಬಗಿಗೆ ಪಶ್ಚಿಮ ಘಟ್ಟವೇ ಪ್ರಭಾವಳಿ:ಸಂಪತ್ ಬಿ. ಸುವರ್ಣ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು ಪ್ರಕರಣಕ್ಕೆ ತಿರುವು: ಪ್ರೇಮ ಪ್ರಕರಣ ವೈಫಲ್ಯ ಶಂಕೆ: ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಪ್ರಕರಣ ದಾಖಲು

Suddi Udaya

ಶ್ರೀ ನಾಗ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಸಾನಿಧ್ಯ ಕ್ಷೇತ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಂತಾರ

Suddi Udaya

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

Suddi Udaya
error: Content is protected !!