23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

ಕಲ್ಲೇರಿ : ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಕಲ್ಲೇರಿಯಲ್ಲಿ ನೂತನವಾಗಿ ಪ್ರಾರಂಭಗೊಂಡ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಶ್ರೀದೇವಿ ಅಣವು ಕಾಂಪ್ಲೆಕ್ಸ್ ಕಲ್ಲೇರಿಯಲ್ಲಿ ಜು. 14 ರಂದು ಶುಭಾರಂಭಗೊಂಡಿತು.

ಸಮಾರಂಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಪಾಲ್ಗೊಂಡು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ತಣ್ಣೀರುಪoತ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ ಎಂ, ಬೆಳ್ತಂಗಡಿ ತಾಲೂಕು ಆರೋಗ್ಯಧಿಕಾರಿ ಡಾ.ಸೌಜನ್ಯ, ಉಪ್ಪಿನಂಗಡಿ ಸಮುದಾಯ ಅರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ. ಕೃಷ್ಣಾನoದ ಕೆ, ತಣ್ಣೀರುಪoತ ಸಿ.ಏ. ಬ್ಯಾಂಕ್ ಅಧ್ಯಕ್ಷರಾದ ಜಗದೀಶ್ ಶೆಟ್ಟಿ, ಪದ್ಮುಂಜ ಸಿ. ಏ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ತಣ್ಣೀರುಪoತ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಯವಿಕ್ರಂ, ತಣ್ಣೀರುಪoತ ಗ್ರಾಮ ಪಂಚಾಯತ್ ಸದಸ್ಯರಾದ ಸಾಮ್ರಾಟ್, ಪ್ರಧಾನ ಮಂತ್ರಿ ಜನೌಷಧಿ ಪರಿಯೋಜನೆಯ ಮಾಜಿ ನೋಡಲ್ ಅಧಿಕಾರಿ ಡಾ. ಅನಿಲ್ ದೀಪಕ್ ಶೆಟ್ಟಿ, ತಣ್ಣೀರುಪoತ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಜಯರಾಜ್ ಹೆಗ್ಡೆ ಪುತ್ತಿಲ ಗುತ್ತು, ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಪುರುಷೋತ್ತಮ ಗೌಡ ಮುಗೆರೋಡಿ, ಉಪ್ಪಿನಂಗಡಿ ವೇದಶಂಕರ ನಗರ ಶ್ರೀರಾಮ ಶಾಲೆಯ ಅಧ್ಯಕ್ಷರಾದ ಸುನಿಲ್ ಗೌಡ ಅಣವು ಉಪಸ್ಥಿತರಿದ್ದರು.


ಮಾಲಕರಾದ ವಿದ್ಯಾಧರ ಜೈನ್ ಪದ್ಮವಿದ್ಯಾ ಉಪ್ಪಿನಂಗಡಿ ಮತ್ತು ಮನೆಯವರು ಬಂದoತಹ ಅತಿಥಿ ಅಭ್ಯಾಗತರನ್ನು ಉಪಚರಿಸಿ, ಸತ್ಕರಿಸಿದರು. ಕಡಿಮೆ ಬೆಲೆಯಲ್ಲಿ ಎಲ್ಲಾ ಔಷಧಿಗಳು ಲಭ್ಯವಿದೆ ಇದರ ಪ್ರಯೋಜನ ಪಡೆದುಕೊಳ್ಳಬೇಕಾಗಿ ಮಾಲಕರು ತಿಳಿಸಿದರು.

Related posts

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ದಿನಾಚರಣೆ

Suddi Udaya

ಶಿರ್ಲಾಲು ರಮಾನಂದ ಟೈಲರ್ ನಿಧನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ ಹಲವರಿಗೆ ಗಾಯ

Suddi Udaya

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ಚಿಬಿದ್ರೆ: ಶತಾಯುಷಿ ಸೇಸು ನಿಧನ

Suddi Udaya

ಮುಗೇರಡ್ಕ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!