ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಪ್ರಸಿದ್ದ ಉದ್ಯಮಿ ಮೋಹನ್ ಕುಮಾರ್ ಅವರನ್ನು ಭೇಟಿಯಾದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮೋಹಿತ್

Suddi Udaya

ಉಜಿರೆ: ಕಳೆದ ವರ್ಷ ಸರಕಾರಿ ಪ್ರೌಢ ಶಾಲೆ ಕಲ್ಮಂಜದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿ ಮೋಹಿತ್ ಇವರಿಗೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ,ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕರಾಗಿರುವ ಕೆ.ಮೋಹನ್ ಕುಮಾರ್ ಇವರು ನೀಡಿದ ಪ್ರೋತ್ಸಾಹದಿಂದ ತ್ರಿಪುರದಲ್ಲಿ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಈ ವರ್ಷ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲೂ ಭಾಗವಹಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾನೆ.

ಪ್ರಥಮ ಪಿಯುಸಿ ವಿದ್ಯಾಭ್ಯಾಸವನ್ನು ವಾಣಿ ಕಾಲೇಜುವಿನಲ್ಲಿ ಪಡೆಯುತ್ತಿದ್ದಾರೆ.

ಮುಂದೆ ಶ್ರೀಲಂಕಾದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ಯೋಗ ಸ್ಪರ್ದೆಗೆ ಆಯ್ಕೆಯಾಗಿದ್ದು ಮೋಹಿತ್ ಅವರನ್ನು ಮೋಹನ್ ಕುಮಾರ್ ಅಭಿನಂದಿಸಿದರು.

Leave a Comment

error: Content is protected !!