26.7 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

ಬೆಳ್ತಂಗಡಿ : ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ವಿಶ್ವವಿದ್ಯಾಲಯ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಯೋಗದ ಜಾಗೃತಿ ಮೂಡಿಸಲು ಭವಿಷ್ಯದ ದುಃಖಗಳನ್ನು ದೂರ ಮಾಡಲು ಯೋಗ ಎಂಬ ಧ್ಯೇಯದೊಂದಿಗೆ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯು ಜುಲೈ 22 ಸೋಮವಾರ ದಿಂದ ಜುಲೈ 23 ಮಂಗಳವಾರ 10 ಗಂಟೆಯವರೆಗೆ 25 ಗಂಟೆಗಳ ನಿರಂತರ ಯೋಗ ತರಬೇತಿ ನಡೆಯಲಿದೆ.

ಯೋಗ ಗುರು ಕುಶಾಲಪ್ಪ ಗೌಡ ರವರು ತಲಾ ಒಂದೂವರೆ ಗಂಟೆಯ 17 ಬ್ಯಾಚ್ ಗಳಲ್ಲಿ ತರಬೇತಿ ನೀಡಲಿದ್ದು, ಭಾಗವಹಿಸುವ ಶಿಬಿರಾರ್ಥಿಗಳಿಗೆ ರೂಪಾಯಿ 500 ಮೌಲ್ಯದ ಯೋಗ ಪುಸ್ತಕ, ಯೋಗ ಬಟ್ಟೆ, ಯೋಗ ಕ್ಯಾಲೆಂಡರ್,ಯೋಗ ಪ್ರಮಾಣ ಪತ್ರ ಮತ್ತು ಉಪಹಾರ ನೀಡಲಾಗುವುದು, ಮುಗೇರಡ್ಕ ಸರ್ಕಾರಿ ಶಾಲಾ ಸೇವಾ ಟ್ರಸ್ಟ್ ನಾ ವಿದ್ಯಾನಿಧಿಗಾಗಿ ಆಯೋಜಿಸಿರುವ ಈ ಶಿಬಿರಕ್ಕೆ ವಿದ್ಯಾರ್ಥಿಗಳಿಂದ ರೂಪಾಯಿ 100,ಸಾರ್ವಜನಿಕರಿಂದ ರೂಪಾಯಿ 200 ನ್ನು ದೇಣಿಗೆ ರೂಪದಲ್ಲಿ ಪಡೆಯಲಾಗುವುದು. ಮೂರು ವಿಶ್ವ ದಾಖಲೆಯ ಪ್ರಯತ್ನ, ಮ್ಯಾರಥಾನ್ ಯೋಗ ಶಿಬಿರ ತರಬೇತಿಯ ಮೂಲಕ ಮೂರು ವಿಶ್ವ ದಾಖಲೆಯನ್ನು ಸಾರಿಸಲು ಪ್ರಯತ್ನಿಸಲಾಗುವುದು, ಒಂದೇ ಯೋಗ ಗುರು, ಒಂದೇ ವೇದಿಕೆಯಲ್ಲಿ ನಿರಂತರ 25 ಗಂಟೆ ಯೋಗ ತರಬೇತಿ ನೀಡುವುದು,

ಈ ತರಬೇತಿಯಲ್ಲಿ 2500 ಕ್ಕೂ ಮಿಕ್ಕಿ ವಿವಿಧ ವೈದ್ಯಕೀಯ ವಿದ್ಯಾರ್ಥಿಗಳು ತರಬೇತಿ ಒಳಗಾಗುವುದು,4000ಕ್ಕೂ ಮಿಕ್ಕಿ ಯೋಗ ಶಿಬಿರಾರ್ಥಿಗಳಿಗೆ ತರಬೇತಿ ಪಡೆಯಲಿದ್ದಾರೆಂದು ಯೋಗ ಗುರು ಕುಶಾಲಪ್ಪ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya

ಮರೋಡಿ: ಊರವರಿಂದ ಶ್ರಮದಾನ, ಕಳೆಗಿಡಗಂಟಿಗಳ ತೆರವು

Suddi Udaya

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

Suddi Udaya

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

Suddi Udaya

ಕರ್ನಾಟಕ ಸರಕಾರವು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 4500 ಕೋಟಿ ರೂ. ಅನುದಾನ ಬಿಡುಗಡೆ ಮತ್ತು ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡುವ ಕುರಿತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಪ ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ವಿವಿಧೆಡೆ ಶಾಸಕ ಹರೀಶ್ ಪೂಂಜ ಮತ ಯಾಚನೆ

Suddi Udaya
error: Content is protected !!