25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದು (ಜು.17) ಬಳಂಜ ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಇವರ ವತಿಯಿಂದ ತಾಳ ಮದ್ದಳೆ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಬಳಂಜ ಇವರ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವವರ ಸಹಾಯಾರ್ಥವಾಗಿ ಜಿಲ್ಲೆಯ ಹೆಸರಾಂತ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ವಿದುರಾತಿಥ್ಯ ರಣವೀಳ್ಯ ಎಂಬ ತಾಳಮದ್ದಳೆ ಕಾರ್ಯಕ್ರಮ ಇಂದು (ಜು.17) ಮಧ್ಯಾಹ್ನ ನಡೆಯಲಿದೆ.

ಬಳಂಜದಲ್ಲಿ ಹಲವಾರು ವರ್ಷಗಳಿಂದ ಸಮಾಜಮುಖಿ ಸೇವೆಯನ್ನು ನಡೆಸುತ್ತಾ ಬಂದಿರುವ ಶಿವಾಜಿ ಫ್ರೆಂಡ್ಸ್ ಕ್ಲಬ್ ಸದಸ್ಯರು ಈ ವರ್ಷವೂ ಅನಾರೋಗ್ಯದಲ್ಲಿರುವ ಬಡ ಕುಟುಂಬಗಳನ್ನು ಗುರುತಿಸಿ ಸಹಾಯಹಸ್ತ ನೀಡುವುದು ಮತ್ತು ಬಳಂಜ ಶಾಲೆಯಲ್ಲಿ ಈ ವರ್ಷ ಹತ್ತನೇ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಇಬ್ಬರು ವಿದ್ಯಾರ್ಥಿಗಳಾದ ಶರಣ್ಯ ಮತ್ತು ಮನ್ವಿತಾರಿಗೆ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಎಲ್ಲರೂ ಈ ಸಮಾರಂಭದಲ್ಲಿ ಭಾಗಿಯಾಗಬೇಕಾಗಿ ಕ್ಲಬ್ ನ ಅಧ್ಯಕ್ಷ ಹರೀಶ್ ದೇವಾಡಿಗ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ್ ಕುಮಾರ್ ಕೆ.ತಿಳಿಸಿದ್ದಾರೆ.

Related posts

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್ : ಶೈಕ್ಷಣಿಕ ಸಾಧನೆಗಳ ಮೂಲಕ ರಾಜ್ಯದಲ್ಲಿ ಗುರುತಿಸ್ಪಟ್ಟ ಕಾಲೇಜು ಎಕ್ಸೆಲ್

Suddi Udaya

ಪೆರಾಲ್ದರಕಟ್ಟೆ ಎಸ್.ಕೆ.ಎಸ್.ಎಸ್.ಎಫ್ ಶಾಖೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಸೋಣಂದೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗುರುವಂದನ ಮತ್ತು ಬೀಳ್ಕೊಡುಗೆ ಸಮಾರಂಭ

Suddi Udaya

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!