23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

ಕಡಿರುದ್ಯಾವರದಲ್ಲಿ ಕಾಡಾನೆ ಕಾಟ

ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬಸವದಡ್ಡು ಪ್ರದೇಶಗಳಲ್ಲಿ ಒಂಟಿ ಸಲಗ ಕೃಷಿ ತೋಟಗಳಿಗೆ ದಾಳಿ ಇಟ್ಟು ಹಾನಿ ಉಂಟು ಮಾಡಿದ ಘಟನೆ ಜು.16 ರಂದು ತಡರಾತ್ರಿ ನಡೆದಿದೆ.


ಇಲ್ಲಿನ ಶಂಕರ ಭಟ್, ಮಚ್ಚೇಂದ್ರ ನಾಯಕ್ ವಿಶ್ವನಾಥ ಪ್ರಭು, ಮಹೇಶ ಭಟ್, ನೀಲಯ್ಯ ಗೌಡ ರಾಮಚಂದ್ರ ಗೌಡ, ಪ್ರವೀಣ ಹಾಗೂ ಇನ್ನಿತರರ ತೋಟಗಳಿಗೆ ನುಗ್ಗಿದ ಸಲಗ ನೂರಾರು ಅಡಕೆ ಮರ ಬಾಳೆ ಗಿಡಗಳನ್ನು ಪುಡಿಗೈದಿದೆ.ಹಲಸಿನ ಮರದಲ್ಲಿದ್ದ ಹಲಸಿನ ಹಣ್ಣುಗಳನ್ನು ತೆಗೆದುಹಾಕಿ ದಾಂಧಲೆ ಎಬ್ಬಿಸಿದ ಕಾಡಾನೆ ಶಂಕರ ಭಟ್ ಅವರು ತೋಟದ ಬದಿಯಲ್ಲಿ ನಿರ್ಮಿಸಿದ್ದ ತಾತ್ಕಾಲಿಕ ಶೆಡ್ ನ್ನು ನೆಲಸಮಗೊಳಿಸಿದೆ.


ಸ್ಥಳೀಯರೊಬ್ಬರು ತೋಟದಲ್ಲಿ ಔಷಧಿ ತಯಾರಿಗಾಗಿ ಇಟ್ಟಿದ್ದ 200 ಲೀಟರ್ ಡ್ರಮ್ ನ್ನು ಆನೆ ಸಮೀಪದಲ್ಲಿ ಹರಿಯುವ ತೋಡಿಗೆ ದೂಡಿ ಹಾಕಿದ್ದು ಅದು ನೀರು ಪಾಲಾಗಿದೆ.


ಕಳೆದ ಹತ್ತು ದಿನಗಳಿಂದ ಕಾಡಾನೆ ಕಡಿರುದ್ಯಾವರ ಗ್ರಾಮದಲ್ಲಿ ಬೀಡು ಬಿಟ್ಟಿದ್ದು ಇಲ್ಲಿನ ರಾಮಂದೊಟ್ಟು, ಪಣಿಕಲ್ಲು, ಹಿತ್ತಿಲ ಕೋಡಿ,ಕೋಡಿ, ಎರುಬಳ್ಳಿ, ಕಾನರ್ಪ ಮುಂತಾದ ಪ್ರದೇಶಗಳ ಮನೆಗಳ ಅಂಗಳದ ತನಕವು ಬಂದಿತ್ತು.
ವಿಪರೀತ ಮಳೆ ಇರುವ ಕಾರಣ ಕಾಡಾನೆ ಮನೆ ಹತ್ತಿರ ಬಂದರೂ ತೋಟದಲ್ಲಿ ಹಾನಿ ಉಂಟುಮಾಡಿದರು ತಕ್ಷಣ ಗಮನಕ್ಕೆ ಬರುತ್ತಿಲ್ಲ ಪಟಾಕಿಗಳನ್ನು ಸಿಡಿಸಿದರು ಆನೆ ಓಡುತ್ತಿಲ್ಲ ಎಂದು ಇಲ್ಲಿನ ಕೃಷಿಕರು ತಿಳಿಸಿದ್ದಾರೆ.

Related posts

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿಂಜೆ ರವರು ಸೌತಡ್ಕ ದೇವಸ್ಥಾನಕ್ಕೆ ಭೇಟಿ, ವಿಶೇಷ ಪೂಜೆ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya

ಚಿತ್ರೀಕರಣ ಪೂರ್ಣಗೊಳಿಸಿದ ಕೃಷ್ಣ ಬೆಳ್ತಂಗಡಿ ನಿರ್ದೇಶನದ “ಇದು ನಮ್ ಶಾಲೆ”

Suddi Udaya
error: Content is protected !!