September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

ಕಡಿರುದ್ಯಾವರದಲ್ಲಿ ಕಾಡಾನೆ ಕಾಟ

ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬಸವದಡ್ಡು ಪ್ರದೇಶಗಳಲ್ಲಿ ಒಂಟಿ ಸಲಗ ಕೃಷಿ ತೋಟಗಳಿಗೆ ದಾಳಿ ಇಟ್ಟು ಹಾನಿ ಉಂಟು ಮಾಡಿದ ಘಟನೆ ಜು.16 ರಂದು ತಡರಾತ್ರಿ ನಡೆದಿದೆ.


ಇಲ್ಲಿನ ಶಂಕರ ಭಟ್, ಮಚ್ಚೇಂದ್ರ ನಾಯಕ್ ವಿಶ್ವನಾಥ ಪ್ರಭು, ಮಹೇಶ ಭಟ್, ನೀಲಯ್ಯ ಗೌಡ ರಾಮಚಂದ್ರ ಗೌಡ, ಪ್ರವೀಣ ಹಾಗೂ ಇನ್ನಿತರರ ತೋಟಗಳಿಗೆ ನುಗ್ಗಿದ ಸಲಗ ನೂರಾರು ಅಡಕೆ ಮರ ಬಾಳೆ ಗಿಡಗಳನ್ನು ಪುಡಿಗೈದಿದೆ.ಹಲಸಿನ ಮರದಲ್ಲಿದ್ದ ಹಲಸಿನ ಹಣ್ಣುಗಳನ್ನು ತೆಗೆದುಹಾಕಿ ದಾಂಧಲೆ ಎಬ್ಬಿಸಿದ ಕಾಡಾನೆ ಶಂಕರ ಭಟ್ ಅವರು ತೋಟದ ಬದಿಯಲ್ಲಿ ನಿರ್ಮಿಸಿದ್ದ ತಾತ್ಕಾಲಿಕ ಶೆಡ್ ನ್ನು ನೆಲಸಮಗೊಳಿಸಿದೆ.


ಸ್ಥಳೀಯರೊಬ್ಬರು ತೋಟದಲ್ಲಿ ಔಷಧಿ ತಯಾರಿಗಾಗಿ ಇಟ್ಟಿದ್ದ 200 ಲೀಟರ್ ಡ್ರಮ್ ನ್ನು ಆನೆ ಸಮೀಪದಲ್ಲಿ ಹರಿಯುವ ತೋಡಿಗೆ ದೂಡಿ ಹಾಕಿದ್ದು ಅದು ನೀರು ಪಾಲಾಗಿದೆ.


ಕಳೆದ ಹತ್ತು ದಿನಗಳಿಂದ ಕಾಡಾನೆ ಕಡಿರುದ್ಯಾವರ ಗ್ರಾಮದಲ್ಲಿ ಬೀಡು ಬಿಟ್ಟಿದ್ದು ಇಲ್ಲಿನ ರಾಮಂದೊಟ್ಟು, ಪಣಿಕಲ್ಲು, ಹಿತ್ತಿಲ ಕೋಡಿ,ಕೋಡಿ, ಎರುಬಳ್ಳಿ, ಕಾನರ್ಪ ಮುಂತಾದ ಪ್ರದೇಶಗಳ ಮನೆಗಳ ಅಂಗಳದ ತನಕವು ಬಂದಿತ್ತು.
ವಿಪರೀತ ಮಳೆ ಇರುವ ಕಾರಣ ಕಾಡಾನೆ ಮನೆ ಹತ್ತಿರ ಬಂದರೂ ತೋಟದಲ್ಲಿ ಹಾನಿ ಉಂಟುಮಾಡಿದರು ತಕ್ಷಣ ಗಮನಕ್ಕೆ ಬರುತ್ತಿಲ್ಲ ಪಟಾಕಿಗಳನ್ನು ಸಿಡಿಸಿದರು ಆನೆ ಓಡುತ್ತಿಲ್ಲ ಎಂದು ಇಲ್ಲಿನ ಕೃಷಿಕರು ತಿಳಿಸಿದ್ದಾರೆ.

Related posts

ಜು.1ರಿಂದ ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ: ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ ಹಾಗೂ ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ,

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya

ದುಬೈಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೇರುಕಟ್ಟೆ :ಪರಪ್ಪು ಜಮಾಅತ್ ನಿಂದ ಅಭಿನಂದನಾ ಸಭೆ: ದರ್ಗಾ ಸುತ್ತಮುತ್ತ ಶಾಶ್ವತ ಕಾಮಗಾರಿ ನಡೆಸಿದ ಮುಸ್ಲಿಮ್ ಯೂತ್ ವಿಂಗ್ ಸಮಿತಿಗೆ ಗೌರವಾರ್ಪಣೆ

Suddi Udaya

ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ

Suddi Udaya

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!