25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಮಟಾ ನೆರೆಪೀಡಿತ ಪ್ರದೇಶಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತುರ್ತು ನೆರವು

ಬೆಳ್ತಂಗಡಿ: ಕುಮಟಾ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆ, ನೆರಹಾವಳಿ ಮತ್ತು ಗುಡ್ಡ ಕುಸಿತದ ಪರಿಣಾಮವಾಗಿ ಹಲವು ಮನೆಗಳು ಮುಳುಗಡೆಯಾಗಿದ್ದು ನೆರೆಪೀಡಿತ ಪ್ರದೇಶದ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿರುವ ಕುಟುಂಬಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತುರ್ತು ನೆರವು ನೀಡಲಾಯಿತು.

ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು ಈ ಬಗ್ಗೆ ಮಾಹಿತಿ ಪಡೆದುಕೊಂಡು ಸುಮಾರು 80 ಜನರಿಗೆ ತುರ್ತಾಗಿ ಬೇಕಾದ ಚಾಪೆ, ಬೆಡ್ ಶೀಟ್ ಹಾಗೂ ಅಗತ್ಯ ವಸ್ತುಗಳ ವ್ಯವಸ್ಥೆಯನ್ನು ಮಾಡಿದ್ದಾರೆ.

ಈ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ವಸ್ತುಗಳನ್ನು ನೀಡಿ ಜನರಿಗೆ ಧೈರ್ಯ ತುಂಬಿದ್ದಾರೆ.

Related posts

ಉಜಿರೆಯ ಎಸ್. ಡಿ. ಎಂ. ಡಿ. ಎಡ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

46 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya
error: Content is protected !!