25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.23 ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪ‌ರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್. ಸ್ಥಾಪನಾ ದಿನಾಚರಣೆ

ಉಜಿರೆ : ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪ‌ರ್ ಮತ್ತು ಕೃಷಿ ಮಜ್ದೂರ್ ಸಂಘ ಇದರ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್. ಸ್ಥಾಪನಾ ದಿನಾಚರಣೆಯು ಜು.23 ರಂದು ಉಜಿರೆ ಶಾರದಾ ಮಂಟಪದಲ್ಲಿ ನಡೆಯಲಿದೆ.

ಉದ್ಘಾಟನೆಯನ್ನು ರಬ್ಬರ್ ಬೋರ್ಡ್ ನಿರ್ದೇಶಕ ಕೇಶವ ಭಟ್ ಮುಳಿಯ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ವಕೀಲರು, ರಬ್ಬರ್ ಟ್ಯಾಪರ್ ಮಜ್ದೂರ್ ಸಂಘದ ಅಧ್ಯಕ್ಷರು, ದ.ಕ. ಭಾರತೀಯ ಮಜ್ದೂರ್ ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು. ವಹಿಸಲಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ, ಮಂಗಳೂರು ವಿಭಾಗದ ಪ್ರಚಾರ ಪ್ರಮುಖ್ ಸೂರಜ್ ಕುಮಾರ್ ಭೌದ್ಧಿಕ್ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘದ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಮಂಗಳೂರು ಕುದುರೆಮುಖ ಮಜ್ದೂರ್ ಸಂಘದ ಕಾರ್ಯಾಧ್ಯಕ್ಷ ಭಗವಾನ್‌ ದಾಸ್, ರಬ್ಬರ್ ಬೆಳೆ ಅಭಿವೃದ್ಧಿ ಅಧಿಕಾರಿ ರೋಶಿನಿ, ಬೆಳ್ತಂಗಡಿ ಕಾರ್ಮಿಕ ನಿರೀಕ್ಷಕ ಹರೀಶ ಎಸ್.ಎನ್, ಉಜಿರೆ ಕೆನರಾ ಬ್ಯಾಂಕ್ ಮುಖ್ಯ ಪ್ರಬಂಧಕರು ಜಯಂತ, ಭಾರತೀಯ ಮಜ್ದೂರ್ ಸಂಘ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್, ಬೆಳ್ತಂಗಡಿ ಭಾರತಿಯ ಮಜ್ದೂರ್ ಸಂಘ ತಾಲೂಕು ಸಮಿತಿ ಅಧ್ಯಕ್ಷ ಉದಯ ಬಿ.ಕೆ, ಆರ್ಥಿಕ ಸಮಾಲೋಚಕರು ಶ್ರೀಮತಿ ಉಷಾ ನಾಯಕ್, ಮಂಗಳೂರು ನಿವೃತ್ತ ರಬ್ಬರ್ ಟ್ಯಾಪಿಂಗ್ ತರಬೇತಿ ಶಿಕ್ಷಕರು ರಾಘವನ್ ಮಾಸ್ಟರ್ ಉಪಸ್ಥಿತರಿರಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ಹರೀಶ್ ಜೆ.ಕೆ, ಹರೀಶ್ ಬೈಲಬರಿ, ಶಶಿಕುಮಾರ್ ಸುಳ್ಯ,ಸ್ಟಾಲಿನ್, ನಾಗರಾಜ ಮಾಚಾರು ಸಹಕರಿಸಲಿದ್ದಾರೆ.

Related posts

ಸುದ್ದಿ ಉದಯ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ ಬಿಡುಗಡೆ: ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರು ಬಿಡುಗಡೆಗೊಳಿಸಿ ಶುಭ ಹಾರೈಕೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿಭಾ ಸಂಗಮ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

Suddi Udaya

ಪದ್ಮುಂಜ ಹಾ.ಉ.ಸ‌. ಸಂಘದ ಮಾಜಿ ನಿರ್ದೇಶಕ ಪೂವನಿ ಗೌಡ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಕಳೆಂಜ: ಪರಪ್ಪುಗುತ್ತು ಪಿ.ಎನ್. ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ

Suddi Udaya
error: Content is protected !!