September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

ಧರ್ಮಸ್ಥಳ: ಪುರಾಣಕ್ಕೆ ಹಲವಾರು ಅರ್ಥಗಳಿವೆ. ಭಾರತ ಮತ್ತು ಚೀನಾ ದೇಶದಲ್ಲಿ ಅತೀ ಹೆಚ್ಚು ಪುರಾಣಗಳಿದ್ದು ನೈತಿಕ ಮತ್ತು ಧಾರ್ಮಿಕ ಮೌಲ್ಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವುದೇ ಪುರಾಣಗಳ ಉದ್ದೇಶವಾಗಿದೆ. ಪುರಾಣ ವಾಚನ – ಪ್ರವಚನದಿಂದ ಪ್ರತಿ ಕಲೆಯೂ,  ಕಲಾವಿದರೂ ಬೆಳೆಯಬೇಕು ಎಂದು ಹಿರಿಯ ವಿದ್ವಾಂಸ ಪ್ರೊ. ಎಮ್. ಪ್ರಭಾಕರ ಜೋಶಿ ಹೇಳಿದರು.


ಅವರು ಜು.16 ರಂದು ಧರ್ಮಸ್ಥಳದಲ್ಲಿ ಜು. 16 ರಿಂದ ಆಗೋಸ್ಟ್ 17 ರ ವರೆಗೆ ಪ್ರತಿ ದಿನ ಸಂಜೆ ಗಂಟೆ 6.30 ರಿಂದ 8.00 ರ ವರೆಗೆ ನಡೆಯಲಿರುವ 53ನೆ ವರ್ಷದ “ಜೈಮಿನಿ ಭಾರತ” ಮತ್ತು “ತುರಂಗ ಭಾರತ” ಪುರಾಣ ಕಾವ್ಯ ವಾಚನ – ಪ್ರವಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ದೇವರ ಕಲ್ಪನೆಯನ್ನು ಜನಮನಕ್ಕೆ ತಲುಪಿಸುವುದೇ ಪುರಾಣಗಳ ಉದ್ದೇಶವಾಗಿದೆ. ವಿಷ್ಣುಪುರಾಣ, ಭಾಗವತ, ರಾಮಾಯಣ, ಮಹಾಭಾರತ ಮೊದಲಾದ ಅನೇಕ ಪುರಾಣಗಳಿವೆ. ರಾಮಾಯಣದಲ್ಲಿಯೂ ಬೇರೆ ಬೇರೆ ಭಾಷೆಗಳಲ್ಲಿ ಹಲವು ರೀತಿಯ ರಾಮಾಯಣಗಳು ರಚನೆಯಾಗಿವೆ. ನಮ್ಮ ಸನಾತನ ಧಾರ್ಮಿಕ ಪರಂಪರೆಯನ್ನು ವಿಸ್ತರಿಸಿ ಸೃಜನಶೀಲತೆಯೊಂದಿಗೆ ಜನರಿಗೆ ತಲುಪಿಸುವ ಕಾಯಕವನ್ನು ಪುರಾಣಗಳು ಮಾಡುತ್ತವೆ.  ಪುರಾಣಗಳಲ್ಲಿ ಜ್ಞಾನ, ವಿಜ್ಞಾನ, ಸಾಹಿತ್ಯ, ಕಲೆ, ಸಂಗೀತ, ಮಾನವೀಯ ಮೌಲ್ಯಗಳು – ಎಲ್ಲವೂ ಅಡಕವಾಗಿವೆ ಎಂದು ಪ್ರೊ. ಎಮ್. ಪ್ರಭಾಕರ ಜೋಶಿ  ಅಭಿಪ್ರಾಯಪಟ್ಟರು.
ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಪುರಾಣ ವಾಚನ – ಪ್ರವಚನದಿಂದ ಸಮಯದ ಸದುಪಯೋಗದೊಂದಿಗೆ ವಿಶಿಷ್ಟ ಮಾಹಿತಿ, ಮಾರ್ಗದರ್ಶನ ದೊರಕುತ್ತದೆ.


ನಮ್ಮ ಜ್ಞಾನ ಕ್ಷಿತಿಜ ವಿಸ್ತರಣೆಯಾಗುತ್ತದೆ ಎಂದು ಹೇಳಿದರು.
ಪ್ರಸ್ತುತ ಜನರಲ್ಲಿ ಮಾತನಾಡುವ ಚಟ ಹೆಚ್ಚಾಗಿದೆ. ಕೇಳುವ ವ್ಯವಧಾನ ಯಾರಲ್ಲೂ ಇರುವುದಿಲ್ಲ. ಎಲ್ಲರೂ ಉತ್ತಮ ಶ್ರೋತೃಗಳಾಗಿ ಜೀವನಶೈಲಿ ಸುಧಾರಣೆ ಮಾಡಿಕೊಳ್ಳಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.
ಹೇಮಾವತಿ ವಿ. ಹೆಗ್ಗಡೆಯವರು ಉಪಸ್ಥಿತರಿದ್ದರು.

ಪ್ರಾಸ್ತಾವಿಕ ಮಾತುಗಳೊಂದಿಗೆ ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ್ ಭಟ್ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ ರಾವ್ ಧರ್ಮಸ್ಥಳ ಕೊನೆಯಲ್ಲಿ ಧನ್ಯವಾದವಿತ್ತರು.

Related posts

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಸಂಸ್ಥೆಯಲ್ಲಿ ಆಟಿದ ರಂಗ್ ಕಾರ್ಯಕ್ರಮ

Suddi Udaya

ಇಳಂತಿಲ: ಮೂರು ದಿನದ ಹಸುಗೂಸಿನೊಂದಿಗೆ ಬಂದು ಮತ ಚಲಾಯಿಸಿದ ಬಾಣಂತಿ

Suddi Udaya

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಕಾರುಣ್ಯ ಸ್ಪರ್ಶ ಯೋಜನೆಯಡಿಯಲ್ಲಿ ಸಹಾಯಧನ ಹಸ್ತಾಂತರ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya

ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ

Suddi Udaya
error: Content is protected !!