25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

ಕುವೆಟ್ಟು : ಮದ್ದಡ್ಕ ಆಲಂದಿಲ ಸಬರಬೈಲು ಸಂಪರ್ಕ ರಸ್ತೆಯ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ನೀರು ರಸ್ತೆಯಲ್ಲೆ ಹರಿಯುತ್ತಿದ್ದು ಸಂಚಾರಕ್ಕೆ ತೊಡಕಾಗಿದೆ.

ಈ ಪರಿಸರದಲ್ಲಿ ಚಿಕ್ಕದಾದ ಕಾಲು ಸಂಕ ಇದ್ದು ರಸ್ತೆಯ ಎರಡು ಬದಿಯಲ್ಲಿ ಚರಂಡಿಯಲ್ಲಿ ಮಣ್ಣು ತುಂಬಿದ್ದು ಸರಾಗವಾಗಿ ಹರಿದು ಹೋಗಬೇಕಾಗಿದ್ದ ನೀರು ಚರಂಡಿಯಲ್ಲಿ ಮಣ್ಣು ತುಂಬಿ ಈಗ ರಸ್ತೆಯಲ್ಲಿ ಹರಿದು ಹೋಗುತ್ತಿದೆ. ಸಮೀಪದಲ್ಲಿ ಮದರಸ ಇದ್ದು ಚಿಕ್ಕ ಚಿಕ್ಕ ಮಕ್ಕಳು ಸ್ಥಳೀಯ ಶಾಲೆಗೆ ಹೋಗುವ ಮಕ್ಕಳು ಈ ರಸ್ತೆಯಲ್ಲಿ ಸಾಗಬೇಕಾಗಿದೆ ರಸ್ತೆಯು ಮೂಡಬಿದ್ರೆ ಕಡೆ ಸಾಗುವ ಪ್ರಯಾಣಿಕರು ಪಡಂಗಡಿ ಪೊಯ್ಯೆ ಗುಡ್ಡೆ ಸಂಪರ್ಕವಾಗಿ ಹೆಚ್ಚಿನ ವಾಹನಗಳು ಈ ರಸ್ತೆಯನ್ನು ಅವಲಂಬಿಸಿದ್ದು ಕಿರಿದಾದ ಈ ರಸ್ತೆಯಲ್ಲಿ ಎದುರು ಕಡೆಯಿಂದ ಬರುವ ವಾಹನಗಳಿಗೆ ಸೈಡ್ ಕೊಡಲು ನಿಲ್ಲಿಸಿಯೇ ಹೋಗುವ ಅನಿವಾರ್ಯಕ್ಕೆ ವಾಹನ ಚಾಲಕರು ಸಿಲುಕಿದ್ದಾರೆ.

ಸಂಬಂಧಿತ ಇಲಾಖೆ ಜನಪ್ರತಿನಿಧಿಗಳು ಗಮನಿಸಿ ಶೀಘ್ರವಾಗಿ ಇದಕ್ಕೆ ಸ್ಪಂದನೆ ನೀಡಬೇಕಾಗಿ ಸಾರ್ವಜನಿಕರ ಅಗ್ರಹ ವ್ಯಕ್ತ ಪಡಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಮದ್ದಡ್ಕ  : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ: ಅಧ್ಯಕ್ಷರಾಗಿ ಗೋಪಿನಾಥ್ ನಾಯಕ್

Suddi Udaya

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ.ಶಾಲೆಯ ಶಿಕ್ಷಕ ನಿಂಗಪ್ಪ ಸೇವಾ ನಿವೃತ್ತಿ

Suddi Udaya
error: Content is protected !!