25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

ಕುವೆಟ್ಟು : ಮದ್ದಡ್ಕ ಆಲಂದಿಲ ಸಬರಬೈಲು ಸಂಪರ್ಕ ರಸ್ತೆಯ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ನೀರು ರಸ್ತೆಯಲ್ಲೆ ಹರಿಯುತ್ತಿದ್ದು ಸಂಚಾರಕ್ಕೆ ತೊಡಕಾಗಿದೆ.

ಈ ಪರಿಸರದಲ್ಲಿ ಚಿಕ್ಕದಾದ ಕಾಲು ಸಂಕ ಇದ್ದು ರಸ್ತೆಯ ಎರಡು ಬದಿಯಲ್ಲಿ ಚರಂಡಿಯಲ್ಲಿ ಮಣ್ಣು ತುಂಬಿದ್ದು ಸರಾಗವಾಗಿ ಹರಿದು ಹೋಗಬೇಕಾಗಿದ್ದ ನೀರು ಚರಂಡಿಯಲ್ಲಿ ಮಣ್ಣು ತುಂಬಿ ಈಗ ರಸ್ತೆಯಲ್ಲಿ ಹರಿದು ಹೋಗುತ್ತಿದೆ. ಸಮೀಪದಲ್ಲಿ ಮದರಸ ಇದ್ದು ಚಿಕ್ಕ ಚಿಕ್ಕ ಮಕ್ಕಳು ಸ್ಥಳೀಯ ಶಾಲೆಗೆ ಹೋಗುವ ಮಕ್ಕಳು ಈ ರಸ್ತೆಯಲ್ಲಿ ಸಾಗಬೇಕಾಗಿದೆ ರಸ್ತೆಯು ಮೂಡಬಿದ್ರೆ ಕಡೆ ಸಾಗುವ ಪ್ರಯಾಣಿಕರು ಪಡಂಗಡಿ ಪೊಯ್ಯೆ ಗುಡ್ಡೆ ಸಂಪರ್ಕವಾಗಿ ಹೆಚ್ಚಿನ ವಾಹನಗಳು ಈ ರಸ್ತೆಯನ್ನು ಅವಲಂಬಿಸಿದ್ದು ಕಿರಿದಾದ ಈ ರಸ್ತೆಯಲ್ಲಿ ಎದುರು ಕಡೆಯಿಂದ ಬರುವ ವಾಹನಗಳಿಗೆ ಸೈಡ್ ಕೊಡಲು ನಿಲ್ಲಿಸಿಯೇ ಹೋಗುವ ಅನಿವಾರ್ಯಕ್ಕೆ ವಾಹನ ಚಾಲಕರು ಸಿಲುಕಿದ್ದಾರೆ.

ಸಂಬಂಧಿತ ಇಲಾಖೆ ಜನಪ್ರತಿನಿಧಿಗಳು ಗಮನಿಸಿ ಶೀಘ್ರವಾಗಿ ಇದಕ್ಕೆ ಸ್ಪಂದನೆ ನೀಡಬೇಕಾಗಿ ಸಾರ್ವಜನಿಕರ ಅಗ್ರಹ ವ್ಯಕ್ತ ಪಡಿಸಿದ್ದಾರೆ.

Related posts

ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಕೆಳಗೆ ಬಿದ್ದ ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು: ಗೇರುಕಟ್ಟೆ ರೇಷ್ಮೆ ರೋಡ್ ಬಳಿ ನಡೆದ ಘಟನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸೈಂಟ್ ಫ್ರಾನ್ಸಿಸ್ ಆಂ.ಮಾ. ಶಾಲೆಗೆ ಶೇ.100 ಫಲಿತಾಂಶ

Suddi Udaya

ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಅರಸಿನಮಕ್ಕಿಯಲ್ಲಿ ಮಹಿಳೆಯರಿಗಾಗಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಕಳೆಂಜ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಸ್ಸಾಂ ರಾಜ್ಯದ ಸಂಸದ ಕಾಮಾಖ್ಯ ಪ್ರಸಾದ ತಾಸಾ ಭೇಟಿ

Suddi Udaya
error: Content is protected !!