25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

ಕಡಿರುದ್ಯಾವರದಲ್ಲಿ ಕಾಡಾನೆ ಕಾಟ

ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬಸವದಡ್ಡು ಪ್ರದೇಶಗಳಲ್ಲಿ ಒಂಟಿ ಸಲಗ ಕೃಷಿ ತೋಟಗಳಿಗೆ ದಾಳಿ ಇಟ್ಟು ಹಾನಿ ಉಂಟು ಮಾಡಿದ ಘಟನೆ ಜು.16 ರಂದು ತಡರಾತ್ರಿ ನಡೆದಿದೆ.


ಇಲ್ಲಿನ ಶಂಕರ ಭಟ್, ಮಚ್ಚೇಂದ್ರ ನಾಯಕ್ ವಿಶ್ವನಾಥ ಪ್ರಭು, ಮಹೇಶ ಭಟ್, ನೀಲಯ್ಯ ಗೌಡ ರಾಮಚಂದ್ರ ಗೌಡ, ಪ್ರವೀಣ ಹಾಗೂ ಇನ್ನಿತರರ ತೋಟಗಳಿಗೆ ನುಗ್ಗಿದ ಸಲಗ ನೂರಾರು ಅಡಕೆ ಮರ ಬಾಳೆ ಗಿಡಗಳನ್ನು ಪುಡಿಗೈದಿದೆ.ಹಲಸಿನ ಮರದಲ್ಲಿದ್ದ ಹಲಸಿನ ಹಣ್ಣುಗಳನ್ನು ತೆಗೆದುಹಾಕಿ ದಾಂಧಲೆ ಎಬ್ಬಿಸಿದ ಕಾಡಾನೆ ಶಂಕರ ಭಟ್ ಅವರು ತೋಟದ ಬದಿಯಲ್ಲಿ ನಿರ್ಮಿಸಿದ್ದ ತಾತ್ಕಾಲಿಕ ಶೆಡ್ ನ್ನು ನೆಲಸಮಗೊಳಿಸಿದೆ.


ಸ್ಥಳೀಯರೊಬ್ಬರು ತೋಟದಲ್ಲಿ ಔಷಧಿ ತಯಾರಿಗಾಗಿ ಇಟ್ಟಿದ್ದ 200 ಲೀಟರ್ ಡ್ರಮ್ ನ್ನು ಆನೆ ಸಮೀಪದಲ್ಲಿ ಹರಿಯುವ ತೋಡಿಗೆ ದೂಡಿ ಹಾಕಿದ್ದು ಅದು ನೀರು ಪಾಲಾಗಿದೆ.


ಕಳೆದ ಹತ್ತು ದಿನಗಳಿಂದ ಕಾಡಾನೆ ಕಡಿರುದ್ಯಾವರ ಗ್ರಾಮದಲ್ಲಿ ಬೀಡು ಬಿಟ್ಟಿದ್ದು ಇಲ್ಲಿನ ರಾಮಂದೊಟ್ಟು, ಪಣಿಕಲ್ಲು, ಹಿತ್ತಿಲ ಕೋಡಿ,ಕೋಡಿ, ಎರುಬಳ್ಳಿ, ಕಾನರ್ಪ ಮುಂತಾದ ಪ್ರದೇಶಗಳ ಮನೆಗಳ ಅಂಗಳದ ತನಕವು ಬಂದಿತ್ತು.
ವಿಪರೀತ ಮಳೆ ಇರುವ ಕಾರಣ ಕಾಡಾನೆ ಮನೆ ಹತ್ತಿರ ಬಂದರೂ ತೋಟದಲ್ಲಿ ಹಾನಿ ಉಂಟುಮಾಡಿದರು ತಕ್ಷಣ ಗಮನಕ್ಕೆ ಬರುತ್ತಿಲ್ಲ ಪಟಾಕಿಗಳನ್ನು ಸಿಡಿಸಿದರು ಆನೆ ಓಡುತ್ತಿಲ್ಲ ಎಂದು ಇಲ್ಲಿನ ಕೃಷಿಕರು ತಿಳಿಸಿದ್ದಾರೆ.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮಡಂತ್ಯಾರು ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಜಲ ಮೂಲ ಶುಚಿತ್ವ ಹಾಗೂ ಹಣ್ಣು ಹಂಪಲು ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya
error: Content is protected !!