23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

ಕಡಿರುದ್ಯಾವರದಲ್ಲಿ ಕಾಡಾನೆ ಕಾಟ

ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬಸವದಡ್ಡು ಪ್ರದೇಶಗಳಲ್ಲಿ ಒಂಟಿ ಸಲಗ ಕೃಷಿ ತೋಟಗಳಿಗೆ ದಾಳಿ ಇಟ್ಟು ಹಾನಿ ಉಂಟು ಮಾಡಿದ ಘಟನೆ ಜು.16 ರಂದು ತಡರಾತ್ರಿ ನಡೆದಿದೆ.


ಇಲ್ಲಿನ ಶಂಕರ ಭಟ್, ಮಚ್ಚೇಂದ್ರ ನಾಯಕ್ ವಿಶ್ವನಾಥ ಪ್ರಭು, ಮಹೇಶ ಭಟ್, ನೀಲಯ್ಯ ಗೌಡ ರಾಮಚಂದ್ರ ಗೌಡ, ಪ್ರವೀಣ ಹಾಗೂ ಇನ್ನಿತರರ ತೋಟಗಳಿಗೆ ನುಗ್ಗಿದ ಸಲಗ ನೂರಾರು ಅಡಕೆ ಮರ ಬಾಳೆ ಗಿಡಗಳನ್ನು ಪುಡಿಗೈದಿದೆ.ಹಲಸಿನ ಮರದಲ್ಲಿದ್ದ ಹಲಸಿನ ಹಣ್ಣುಗಳನ್ನು ತೆಗೆದುಹಾಕಿ ದಾಂಧಲೆ ಎಬ್ಬಿಸಿದ ಕಾಡಾನೆ ಶಂಕರ ಭಟ್ ಅವರು ತೋಟದ ಬದಿಯಲ್ಲಿ ನಿರ್ಮಿಸಿದ್ದ ತಾತ್ಕಾಲಿಕ ಶೆಡ್ ನ್ನು ನೆಲಸಮಗೊಳಿಸಿದೆ.


ಸ್ಥಳೀಯರೊಬ್ಬರು ತೋಟದಲ್ಲಿ ಔಷಧಿ ತಯಾರಿಗಾಗಿ ಇಟ್ಟಿದ್ದ 200 ಲೀಟರ್ ಡ್ರಮ್ ನ್ನು ಆನೆ ಸಮೀಪದಲ್ಲಿ ಹರಿಯುವ ತೋಡಿಗೆ ದೂಡಿ ಹಾಕಿದ್ದು ಅದು ನೀರು ಪಾಲಾಗಿದೆ.


ಕಳೆದ ಹತ್ತು ದಿನಗಳಿಂದ ಕಾಡಾನೆ ಕಡಿರುದ್ಯಾವರ ಗ್ರಾಮದಲ್ಲಿ ಬೀಡು ಬಿಟ್ಟಿದ್ದು ಇಲ್ಲಿನ ರಾಮಂದೊಟ್ಟು, ಪಣಿಕಲ್ಲು, ಹಿತ್ತಿಲ ಕೋಡಿ,ಕೋಡಿ, ಎರುಬಳ್ಳಿ, ಕಾನರ್ಪ ಮುಂತಾದ ಪ್ರದೇಶಗಳ ಮನೆಗಳ ಅಂಗಳದ ತನಕವು ಬಂದಿತ್ತು.
ವಿಪರೀತ ಮಳೆ ಇರುವ ಕಾರಣ ಕಾಡಾನೆ ಮನೆ ಹತ್ತಿರ ಬಂದರೂ ತೋಟದಲ್ಲಿ ಹಾನಿ ಉಂಟುಮಾಡಿದರು ತಕ್ಷಣ ಗಮನಕ್ಕೆ ಬರುತ್ತಿಲ್ಲ ಪಟಾಕಿಗಳನ್ನು ಸಿಡಿಸಿದರು ಆನೆ ಓಡುತ್ತಿಲ್ಲ ಎಂದು ಇಲ್ಲಿನ ಕೃಷಿಕರು ತಿಳಿಸಿದ್ದಾರೆ.

Related posts

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya

ಬೆಳಾಲು: ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ

Suddi Udaya

ಪುದುವೆಟ್ಟು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಲೋನ್ ಆಪ್ ನಿಂದ ಸಾಲ ಪಡೆದುಕೊಂಡ ವದಂತಿ: ಕಂಪೆನಿಯ ಬೆದರಿಕೆಗೆ ಹೆದರಿ ಆತ್ಮಹತ್ಯೆ ಶಂಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ “ನಂದಗೋಕುಲ” ಸ್ವ-ಸಹಾಯ ಸಂಘದ ರಚನೆ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿಡೊಂಜಿ ದಿನ

Suddi Udaya
error: Content is protected !!