22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

ಕಡಿರುದ್ಯಾವರದಲ್ಲಿ ಕಾಡಾನೆ ಕಾಟ

ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬಸವದಡ್ಡು ಪ್ರದೇಶಗಳಲ್ಲಿ ಒಂಟಿ ಸಲಗ ಕೃಷಿ ತೋಟಗಳಿಗೆ ದಾಳಿ ಇಟ್ಟು ಹಾನಿ ಉಂಟು ಮಾಡಿದ ಘಟನೆ ಜು.16 ರಂದು ತಡರಾತ್ರಿ ನಡೆದಿದೆ.


ಇಲ್ಲಿನ ಶಂಕರ ಭಟ್, ಮಚ್ಚೇಂದ್ರ ನಾಯಕ್ ವಿಶ್ವನಾಥ ಪ್ರಭು, ಮಹೇಶ ಭಟ್, ನೀಲಯ್ಯ ಗೌಡ ರಾಮಚಂದ್ರ ಗೌಡ, ಪ್ರವೀಣ ಹಾಗೂ ಇನ್ನಿತರರ ತೋಟಗಳಿಗೆ ನುಗ್ಗಿದ ಸಲಗ ನೂರಾರು ಅಡಕೆ ಮರ ಬಾಳೆ ಗಿಡಗಳನ್ನು ಪುಡಿಗೈದಿದೆ.ಹಲಸಿನ ಮರದಲ್ಲಿದ್ದ ಹಲಸಿನ ಹಣ್ಣುಗಳನ್ನು ತೆಗೆದುಹಾಕಿ ದಾಂಧಲೆ ಎಬ್ಬಿಸಿದ ಕಾಡಾನೆ ಶಂಕರ ಭಟ್ ಅವರು ತೋಟದ ಬದಿಯಲ್ಲಿ ನಿರ್ಮಿಸಿದ್ದ ತಾತ್ಕಾಲಿಕ ಶೆಡ್ ನ್ನು ನೆಲಸಮಗೊಳಿಸಿದೆ.


ಸ್ಥಳೀಯರೊಬ್ಬರು ತೋಟದಲ್ಲಿ ಔಷಧಿ ತಯಾರಿಗಾಗಿ ಇಟ್ಟಿದ್ದ 200 ಲೀಟರ್ ಡ್ರಮ್ ನ್ನು ಆನೆ ಸಮೀಪದಲ್ಲಿ ಹರಿಯುವ ತೋಡಿಗೆ ದೂಡಿ ಹಾಕಿದ್ದು ಅದು ನೀರು ಪಾಲಾಗಿದೆ.


ಕಳೆದ ಹತ್ತು ದಿನಗಳಿಂದ ಕಾಡಾನೆ ಕಡಿರುದ್ಯಾವರ ಗ್ರಾಮದಲ್ಲಿ ಬೀಡು ಬಿಟ್ಟಿದ್ದು ಇಲ್ಲಿನ ರಾಮಂದೊಟ್ಟು, ಪಣಿಕಲ್ಲು, ಹಿತ್ತಿಲ ಕೋಡಿ,ಕೋಡಿ, ಎರುಬಳ್ಳಿ, ಕಾನರ್ಪ ಮುಂತಾದ ಪ್ರದೇಶಗಳ ಮನೆಗಳ ಅಂಗಳದ ತನಕವು ಬಂದಿತ್ತು.
ವಿಪರೀತ ಮಳೆ ಇರುವ ಕಾರಣ ಕಾಡಾನೆ ಮನೆ ಹತ್ತಿರ ಬಂದರೂ ತೋಟದಲ್ಲಿ ಹಾನಿ ಉಂಟುಮಾಡಿದರು ತಕ್ಷಣ ಗಮನಕ್ಕೆ ಬರುತ್ತಿಲ್ಲ ಪಟಾಕಿಗಳನ್ನು ಸಿಡಿಸಿದರು ಆನೆ ಓಡುತ್ತಿಲ್ಲ ಎಂದು ಇಲ್ಲಿನ ಕೃಷಿಕರು ತಿಳಿಸಿದ್ದಾರೆ.

Related posts

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಉಜಿರೆ: ಕೋಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರದ ಕುರಿತು ಪ್ರಾತ್ಯಕ್ಷಿಕೆ

Suddi Udaya

ಶಶಾಂಕ್ ಬೊಲ್ಮ ಅವರಿಗೆ ಪಿಹೆಚ್‌‌ಡಿ ಪದವಿ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಮುಂಡಾಜೆ ವಲಯದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ: ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ:

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

Suddi Udaya
error: Content is protected !!