ಕನ್ಯಾಡಿ ದೇವರಗುಡ್ಡೆ ಗುರುದೇವ ಮಠಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ:

Suddi Udaya

ಕನ್ಯಾಡಿ : ದಕ್ಷಿಣದ ಅಯೋಧ್ಯೆ ಎಂದೇ ಪ್ರಸಿದ್ಧಿ ಪಡೆದಿರುವ ಕನ್ಯಾಡಿ ದೇವರಗುಡ್ಡೆ ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಕೇಂದ್ರ ಸರಕಾರದ ಜಲಶಕ್ತಿ ಮತ್ತು ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ ಇಂದು ಸಂಜೆ ಕನ್ಯಾಡಿಯ ಶ್ರೀ ಗುರುದೇವ ಮಠಕ್ಕೆ ಆಗಮಿಸಿದರು.

ನಂತರ ಶ್ರೀ ಕ್ಷೇತ್ರದ ಪೀಠಾಧಿಪತಿ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿದ ಸಚಿವ ವಿ. ಸೋಮಣ್ಣ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಕ್ಷೇತ್ರಕ್ಕೆ ಆಗಮಿಸಿದ ಸಚಿವ ವಿ. ಸೋಮಣ್ಣ ಅವರನ್ನು ಕ್ಷೇತ್ರದ ಪರವಾಗಿ ಸ್ವಾಮೀಜಿಯವರು ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಂ ಡಿ. ಹಾಗೂ ಇತರರು ಉಪಸ್ಥಿತರಿದ್ದರು.

Leave a Comment

error: Content is protected !!