July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.23 ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪ‌ರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್. ಸ್ಥಾಪನಾ ದಿನಾಚರಣೆ

ಉಜಿರೆ : ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪ‌ರ್ ಮತ್ತು ಕೃಷಿ ಮಜ್ದೂರ್ ಸಂಘ ಇದರ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್. ಸ್ಥಾಪನಾ ದಿನಾಚರಣೆಯು ಜು.23 ರಂದು ಉಜಿರೆ ಶಾರದಾ ಮಂಟಪದಲ್ಲಿ ನಡೆಯಲಿದೆ.

ಉದ್ಘಾಟನೆಯನ್ನು ರಬ್ಬರ್ ಬೋರ್ಡ್ ನಿರ್ದೇಶಕ ಕೇಶವ ಭಟ್ ಮುಳಿಯ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ವಕೀಲರು, ರಬ್ಬರ್ ಟ್ಯಾಪರ್ ಮಜ್ದೂರ್ ಸಂಘದ ಅಧ್ಯಕ್ಷರು, ದ.ಕ. ಭಾರತೀಯ ಮಜ್ದೂರ್ ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು. ವಹಿಸಲಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ, ಮಂಗಳೂರು ವಿಭಾಗದ ಪ್ರಚಾರ ಪ್ರಮುಖ್ ಸೂರಜ್ ಕುಮಾರ್ ಭೌದ್ಧಿಕ್ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘದ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಮಂಗಳೂರು ಕುದುರೆಮುಖ ಮಜ್ದೂರ್ ಸಂಘದ ಕಾರ್ಯಾಧ್ಯಕ್ಷ ಭಗವಾನ್‌ ದಾಸ್, ರಬ್ಬರ್ ಬೆಳೆ ಅಭಿವೃದ್ಧಿ ಅಧಿಕಾರಿ ರೋಶಿನಿ, ಬೆಳ್ತಂಗಡಿ ಕಾರ್ಮಿಕ ನಿರೀಕ್ಷಕ ಹರೀಶ ಎಸ್.ಎನ್, ಉಜಿರೆ ಕೆನರಾ ಬ್ಯಾಂಕ್ ಮುಖ್ಯ ಪ್ರಬಂಧಕರು ಜಯಂತ, ಭಾರತೀಯ ಮಜ್ದೂರ್ ಸಂಘ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್, ಬೆಳ್ತಂಗಡಿ ಭಾರತಿಯ ಮಜ್ದೂರ್ ಸಂಘ ತಾಲೂಕು ಸಮಿತಿ ಅಧ್ಯಕ್ಷ ಉದಯ ಬಿ.ಕೆ, ಆರ್ಥಿಕ ಸಮಾಲೋಚಕರು ಶ್ರೀಮತಿ ಉಷಾ ನಾಯಕ್, ಮಂಗಳೂರು ನಿವೃತ್ತ ರಬ್ಬರ್ ಟ್ಯಾಪಿಂಗ್ ತರಬೇತಿ ಶಿಕ್ಷಕರು ರಾಘವನ್ ಮಾಸ್ಟರ್ ಉಪಸ್ಥಿತರಿರಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ಹರೀಶ್ ಜೆ.ಕೆ, ಹರೀಶ್ ಬೈಲಬರಿ, ಶಶಿಕುಮಾರ್ ಸುಳ್ಯ,ಸ್ಟಾಲಿನ್, ನಾಗರಾಜ ಮಾಚಾರು ಸಹಕರಿಸಲಿದ್ದಾರೆ.

Related posts

ಬೆಳ್ತಂಗಡಿ ವಕೀಲರ ಸಂಘಕ್ಕೆ ರಾಜ್ಯ ವಕೀಲರ ಪರಿಷತ್ತಿನ ನೂತನ ಸದಸ್ಯರಾಗಿ ಆಯ್ಕೆಯಾದ ನಾರಾಯಣ ಸ್ವಾಮಿ ಭೇಟಿ

Suddi Udaya

ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿಯ ವಾರ್ಷಿಕ ಮಹಾಸಭೆ ಹಾಗೂ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸುಲ್ಕೇರಿ-ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಸುನಿಲ್ ಅಸೌಖ್ಯದಿಂದ ಮೃತ್ಯು

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜ್ವಲ ಯೋಜನೆಯ ಮಹಿಳೆಯರ ಮೇಲೂ, “ಬೆಲೆ ಏರಿಕೆಯ ಬರೆ ಎಳೆದ” ಕೇಂದ್ರ ಸರ್ಕಾರ: ರಕ್ಷಿತ್ ಶಿವರಾಂ

Suddi Udaya

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
error: Content is protected !!