April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

ಕುವೆಟ್ಟು : ಮದ್ದಡ್ಕ ಆಲಂದಿಲ ಸಬರಬೈಲು ಸಂಪರ್ಕ ರಸ್ತೆಯ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ನೀರು ರಸ್ತೆಯಲ್ಲೆ ಹರಿಯುತ್ತಿದ್ದು ಸಂಚಾರಕ್ಕೆ ತೊಡಕಾಗಿದೆ.

ಈ ಪರಿಸರದಲ್ಲಿ ಚಿಕ್ಕದಾದ ಕಾಲು ಸಂಕ ಇದ್ದು ರಸ್ತೆಯ ಎರಡು ಬದಿಯಲ್ಲಿ ಚರಂಡಿಯಲ್ಲಿ ಮಣ್ಣು ತುಂಬಿದ್ದು ಸರಾಗವಾಗಿ ಹರಿದು ಹೋಗಬೇಕಾಗಿದ್ದ ನೀರು ಚರಂಡಿಯಲ್ಲಿ ಮಣ್ಣು ತುಂಬಿ ಈಗ ರಸ್ತೆಯಲ್ಲಿ ಹರಿದು ಹೋಗುತ್ತಿದೆ. ಸಮೀಪದಲ್ಲಿ ಮದರಸ ಇದ್ದು ಚಿಕ್ಕ ಚಿಕ್ಕ ಮಕ್ಕಳು ಸ್ಥಳೀಯ ಶಾಲೆಗೆ ಹೋಗುವ ಮಕ್ಕಳು ಈ ರಸ್ತೆಯಲ್ಲಿ ಸಾಗಬೇಕಾಗಿದೆ ರಸ್ತೆಯು ಮೂಡಬಿದ್ರೆ ಕಡೆ ಸಾಗುವ ಪ್ರಯಾಣಿಕರು ಪಡಂಗಡಿ ಪೊಯ್ಯೆ ಗುಡ್ಡೆ ಸಂಪರ್ಕವಾಗಿ ಹೆಚ್ಚಿನ ವಾಹನಗಳು ಈ ರಸ್ತೆಯನ್ನು ಅವಲಂಬಿಸಿದ್ದು ಕಿರಿದಾದ ಈ ರಸ್ತೆಯಲ್ಲಿ ಎದುರು ಕಡೆಯಿಂದ ಬರುವ ವಾಹನಗಳಿಗೆ ಸೈಡ್ ಕೊಡಲು ನಿಲ್ಲಿಸಿಯೇ ಹೋಗುವ ಅನಿವಾರ್ಯಕ್ಕೆ ವಾಹನ ಚಾಲಕರು ಸಿಲುಕಿದ್ದಾರೆ.

ಸಂಬಂಧಿತ ಇಲಾಖೆ ಜನಪ್ರತಿನಿಧಿಗಳು ಗಮನಿಸಿ ಶೀಘ್ರವಾಗಿ ಇದಕ್ಕೆ ಸ್ಪಂದನೆ ನೀಡಬೇಕಾಗಿ ಸಾರ್ವಜನಿಕರ ಅಗ್ರಹ ವ್ಯಕ್ತ ಪಡಿಸಿದ್ದಾರೆ.

Related posts

ಮಚ್ಚಿನ ಸ. ಪ್ರೌ.ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಯೋಗಿಶ್. ಎಸ್ ರವರಿಗೆ ಬೀಳ್ಕೊಡುಗೆ

Suddi Udaya

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

Suddi Udaya
error: Content is protected !!