25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

ಕುವೆಟ್ಟು : ಮದ್ದಡ್ಕ ಆಲಂದಿಲ ಸಬರಬೈಲು ಸಂಪರ್ಕ ರಸ್ತೆಯ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ನೀರು ರಸ್ತೆಯಲ್ಲೆ ಹರಿಯುತ್ತಿದ್ದು ಸಂಚಾರಕ್ಕೆ ತೊಡಕಾಗಿದೆ.

ಈ ಪರಿಸರದಲ್ಲಿ ಚಿಕ್ಕದಾದ ಕಾಲು ಸಂಕ ಇದ್ದು ರಸ್ತೆಯ ಎರಡು ಬದಿಯಲ್ಲಿ ಚರಂಡಿಯಲ್ಲಿ ಮಣ್ಣು ತುಂಬಿದ್ದು ಸರಾಗವಾಗಿ ಹರಿದು ಹೋಗಬೇಕಾಗಿದ್ದ ನೀರು ಚರಂಡಿಯಲ್ಲಿ ಮಣ್ಣು ತುಂಬಿ ಈಗ ರಸ್ತೆಯಲ್ಲಿ ಹರಿದು ಹೋಗುತ್ತಿದೆ. ಸಮೀಪದಲ್ಲಿ ಮದರಸ ಇದ್ದು ಚಿಕ್ಕ ಚಿಕ್ಕ ಮಕ್ಕಳು ಸ್ಥಳೀಯ ಶಾಲೆಗೆ ಹೋಗುವ ಮಕ್ಕಳು ಈ ರಸ್ತೆಯಲ್ಲಿ ಸಾಗಬೇಕಾಗಿದೆ ರಸ್ತೆಯು ಮೂಡಬಿದ್ರೆ ಕಡೆ ಸಾಗುವ ಪ್ರಯಾಣಿಕರು ಪಡಂಗಡಿ ಪೊಯ್ಯೆ ಗುಡ್ಡೆ ಸಂಪರ್ಕವಾಗಿ ಹೆಚ್ಚಿನ ವಾಹನಗಳು ಈ ರಸ್ತೆಯನ್ನು ಅವಲಂಬಿಸಿದ್ದು ಕಿರಿದಾದ ಈ ರಸ್ತೆಯಲ್ಲಿ ಎದುರು ಕಡೆಯಿಂದ ಬರುವ ವಾಹನಗಳಿಗೆ ಸೈಡ್ ಕೊಡಲು ನಿಲ್ಲಿಸಿಯೇ ಹೋಗುವ ಅನಿವಾರ್ಯಕ್ಕೆ ವಾಹನ ಚಾಲಕರು ಸಿಲುಕಿದ್ದಾರೆ.

ಸಂಬಂಧಿತ ಇಲಾಖೆ ಜನಪ್ರತಿನಿಧಿಗಳು ಗಮನಿಸಿ ಶೀಘ್ರವಾಗಿ ಇದಕ್ಕೆ ಸ್ಪಂದನೆ ನೀಡಬೇಕಾಗಿ ಸಾರ್ವಜನಿಕರ ಅಗ್ರಹ ವ್ಯಕ್ತ ಪಡಿಸಿದ್ದಾರೆ.

Related posts

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನೆ

Suddi Udaya

ಕನ್ಯಾಡಿ II: ವಿ. ಆರ್. ಶಾರದಾ ನಿಧನ

Suddi Udaya

ಕುಕ್ಕೇಡಿ ಬುಲೆಕ್ಕಾರ ಶಾಲೆಯ ಮಕ್ಕಳಿಂದ ನೇಜಿ ನಾಟಿ

Suddi Udaya

ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ ಯುವ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ “ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ”ಪ್ರದಾನ

Suddi Udaya

ಧರ್ಮಸ್ಥಳ ಮಲ್ಲರ್ಮಾಡಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya
error: Content is protected !!