25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

ಕುವೆಟ್ಟು : ಮದ್ದಡ್ಕ ಆಲಂದಿಲ ಸಬರಬೈಲು ಸಂಪರ್ಕ ರಸ್ತೆಯ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ನೀರು ರಸ್ತೆಯಲ್ಲೆ ಹರಿಯುತ್ತಿದ್ದು ಸಂಚಾರಕ್ಕೆ ತೊಡಕಾಗಿದೆ.

ಈ ಪರಿಸರದಲ್ಲಿ ಚಿಕ್ಕದಾದ ಕಾಲು ಸಂಕ ಇದ್ದು ರಸ್ತೆಯ ಎರಡು ಬದಿಯಲ್ಲಿ ಚರಂಡಿಯಲ್ಲಿ ಮಣ್ಣು ತುಂಬಿದ್ದು ಸರಾಗವಾಗಿ ಹರಿದು ಹೋಗಬೇಕಾಗಿದ್ದ ನೀರು ಚರಂಡಿಯಲ್ಲಿ ಮಣ್ಣು ತುಂಬಿ ಈಗ ರಸ್ತೆಯಲ್ಲಿ ಹರಿದು ಹೋಗುತ್ತಿದೆ. ಸಮೀಪದಲ್ಲಿ ಮದರಸ ಇದ್ದು ಚಿಕ್ಕ ಚಿಕ್ಕ ಮಕ್ಕಳು ಸ್ಥಳೀಯ ಶಾಲೆಗೆ ಹೋಗುವ ಮಕ್ಕಳು ಈ ರಸ್ತೆಯಲ್ಲಿ ಸಾಗಬೇಕಾಗಿದೆ ರಸ್ತೆಯು ಮೂಡಬಿದ್ರೆ ಕಡೆ ಸಾಗುವ ಪ್ರಯಾಣಿಕರು ಪಡಂಗಡಿ ಪೊಯ್ಯೆ ಗುಡ್ಡೆ ಸಂಪರ್ಕವಾಗಿ ಹೆಚ್ಚಿನ ವಾಹನಗಳು ಈ ರಸ್ತೆಯನ್ನು ಅವಲಂಬಿಸಿದ್ದು ಕಿರಿದಾದ ಈ ರಸ್ತೆಯಲ್ಲಿ ಎದುರು ಕಡೆಯಿಂದ ಬರುವ ವಾಹನಗಳಿಗೆ ಸೈಡ್ ಕೊಡಲು ನಿಲ್ಲಿಸಿಯೇ ಹೋಗುವ ಅನಿವಾರ್ಯಕ್ಕೆ ವಾಹನ ಚಾಲಕರು ಸಿಲುಕಿದ್ದಾರೆ.

ಸಂಬಂಧಿತ ಇಲಾಖೆ ಜನಪ್ರತಿನಿಧಿಗಳು ಗಮನಿಸಿ ಶೀಘ್ರವಾಗಿ ಇದಕ್ಕೆ ಸ್ಪಂದನೆ ನೀಡಬೇಕಾಗಿ ಸಾರ್ವಜನಿಕರ ಅಗ್ರಹ ವ್ಯಕ್ತ ಪಡಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷ ದ್ವಿತೀಯ ಸ್ಥಾನ

Suddi Udaya

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

Suddi Udaya

ಸೆ.5: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!