23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗೇರರು ಕೊನೆಯ ಬಾರಿ ವಿಧಾನಸೌಧಕ್ಕೆ ಭೇಟಿ ನೀಡಿ ಶಿಫಾರಸ್ಸು ಮಾಡಿದ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿ ಗೌರವ ನೀಡಿದ ಮುಖ್ಯಮಂತ್ರಿಗಳು

ಬೆಳ್ತಂಗಡಿ: ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರು ಯಾವುದೇ ಕಡತ ಹಿಡಿದುಕೊಂಡು ತಮ್ಮ ಬಳಿ ಬಂದರೂ ಮರು ಮಾತನಾಡದೆ ಸಹಿ ಹಾಕುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಮಾಜಿ ಶಾಸಕರು ಅನಾರೋಗ್ಯಕ್ಕಿಡಾಗುವ ಸ್ವಲ್ಪ ದಿನದ ಮುಂಚೆ ಬೆಂಗಳೂರಿಗೆ ಭೇಟಿ ನೀಡಿ ಶಿಫಾರಸ್ಸು ಮಾಡಿದ ತನ್ನ ಕ್ಷೇತ್ರದ ಬ್ರಹ್ಮಶ್ರೀ ನಾರಾಯಣ ಗುರುಗಳ ಕ್ಷೇತ್ರಕ್ಕೆ ಸಂಬಂದಿಸಿದ ಕಡತವನ್ನು ಮಂಜೂರುಗೊಳಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಿದ್ದಾರೆ.

ಕಳೆದ ಜನವರಿ 04 ರಂದು ಮಾಜಿ ಶಾಸಕರಾದ ಕೆ. ವಸಂತ ಬಂಗೇರರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಬೇಕೆಂದು ಬೆಂಗಳೂರಿಗೆ ತೆರಳಿದ ನಿಯೋಗದಲ್ಲಿದ್ದ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾದ ಹರೀಶ್ ಕುಮಾರ್, ಪೊಕ್ಕಿ ಮತ್ತು ಕಾರ್ಯದರ್ಶಿ ಸತೀಶ್ ಪೂಜಾರಿ, ಉಜಿರ್ದಡ್ಡ ರವರುಗಳು ತಮ್ಮ ಸಂಘದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಉತ್ತೇಜಸಲು ವೇಣೂರು ಗ್ರಾಮದಲ್ಲಿ 0.14 ಸೆಂಟ್ಸ್ ಜಮೀನು ಕಾದಿರುರಿಸುವರೇ ವಿಧಾನ ಸೌಧದ ಬಹು ಮಹಡಿ ಕಟ್ಟಡ (ಎಂ ಎಸ್ ಬಿಲ್ಡಿಂಗ್ ) ದಲ್ಲಿರುವ ಕಂದಾಯ ಇಲಾಖೆಯ ಪೀಠಾಧಿಪತಿಗಳ ಬಳಿ ಇದ್ದ ಕಡತವನ್ನು ಸಚಿವ ಸಂಪುಟದ ಸಭೆಗೆ ಮಂಡಿಸುವರೇ ತಾವು ಸೂಚಿಸಬೇಕು ಎಂದು ಕೋರಿದಾಗ ಅವರಿಬ್ಬರನ್ನು ತಾನು ವಾಸ್ತವ್ಯ ಮಾಡಿಕೊಂಡಿದ್ದ ಕುಮಾರ ಕೃಪಾ ಗೆಸ್ಟ್ ಹೌಸ್ ಗೆ ಕರೆದುಕೊಂಡು ಹೋಗಿ ತಾವೇ ಸ್ವತಃ ಹಣ ಪಾವತಿಸಿ ಪ್ರತ್ಯೇಕ ಕೊಠಡಿ ಮಾಡಿಕೊಟ್ಟು ಮರುದಿನ ಬೆಳಗ್ಗೆ ಅವರೊಂದಿಗೆ ಬಹು ಮಹಡಿ ಕಟ್ಟಡಕ್ಕೆ ಬಂದ ಬಂಗೇರರು ಖುದ್ದು ಪೀಠಾಧಿಪತಿಗಳ ಕಚೇರಿಗೆ ಬಂದು ಕಡತವನ್ನು ಕಂದಾಯ ಸಚಿವರಾದ ಬೈರೇ ಗೌಡರ ಬಳಿ ಕಳುಹಿಸುವಂತೆ ಸೂಚಿಸಿ ನಂತರ ಕೃಷ್ಣ ಬೈರೇ ಗೌಡರನ್ನು ಭೇಟಿ ಮಾಡಿ ಕಡತವನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಂತೆ ಮನವಿ ಮಾಡಿದ್ದರು.

ಇದೀಗ ಅವರು ಕೊನೆಯದಾಗಿ ವಿಧಾನ ಸೌಧಕ್ಕೆ ಭೇಟಿ ನೀಡಿ ತನ್ನ ಕ್ಷೇತ್ರದ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಜಮೀನು ಮಂಜೂರಾತಿಗಾಗಿ ಶ್ರಮಿಸಿದ ಕಡತವನ್ನು ಮುಖ್ಯಮಂತ್ರಿಗಳು ಮಂಜೂರುಗೋಳಿಸಿರುವುದು ಬಂಗೇರರ ಅಭಿಮಾನಿಗಳಲ್ಲಿ ಹರ್ಷ ಮೂಡಿಸಿದೆ.

Related posts

ಪಶುಸಂಗೋಪನಾ ಇಲಾಖೆಯ ಅಧಿಕಾರಿ ಜಯಕೀರ್ತಿ ಜೈನ್ ಸೇವಾ ನಿವೃತ್ತಿ

Suddi Udaya

ಕರಿಮಣಿ ಸರ ಸಹಿತ ಅಗತ್ಯ ವಸ್ತುಗಳು ಕಳೆದು ಹೋಗಿದೆ: ಸಿಕ್ಕಿದವರು ಸಂಪರ್ಕಿಸುವಂತೆ ಮನವಿ

Suddi Udaya

ಶಿಶಿಲ ಹಾ.ಉ.ಸ. ಸಂಘದ ಅಧ್ಯಕ್ಷರಾಗಿ ಸಂತೋಷ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಡಿ ಲಕ್ಷ್ಮೀಶ ಗೌಡ ಆಯ್ಕೆ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಹಾಸಭೆ: ವಾರ್ಷಿಕ 150 ಕೋಟಿ ವ್ಯವಹಾರ ಮಾಡಿ 69 ಲಕ್ಷ ನಿವ್ವಳ ಲಾಭ ಗಳಿಸಿದ್ದೇವೆ: ನವೀನ್ ಕೆ ಸಾಮಾನಿ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಜ್ಯೋತಿ ಆಸ್ಪತ್ರೆ ಆಶ್ರಯದಲ್ಲಿ ಜೀವ ರಕ್ಷಕದ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!