ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ದಿ.ವಸಂತ ಬಂಗೇರರ ಪರವಾಗಿ ಪತ್ನಿ ಸುಜೀತಾ ವಿ. ಬಂಗೇರರಿಗೆ ಅಭಿನಂದನೆ

Suddi Udaya

ವೇಣೂರು: ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಕರ್ನಾಟಕ ಸರಕಾರದಿಂದ ಜಮೀನು ಮಂಜೂರುಗೊಳಿಸುವಲ್ಲಿ ಶ್ರಮಿಸಿದ ಮಾಜಿ ಶಾಸಕ ದಿ.ವಸಂತ ಬಂಗೇರರ ಪರವಾಗಿ ಅವರ ಪತ್ನಿ ಸುಜೀತಾ ವಿ. ಬಂಗೇರರಿಗೆ ಕೃತಜ್ಞತೆಯೊಂದಿಗೆ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಕಾರ್ಯದರ್ಶಿ ರಾಕೇಶ್ ಕುಮಾರ್, ಕೋಶಾಧಿಕಾರಿ ಯೋಗೀಶ್ ಬಿಕೊಟ್ಟು, ಜೊತೆ ಕಾರ್ಯದರ್ಶಿ ಸತೀಶ್ ಪೂಜಾರಿ ಉಜಿರ್ದಡ್ಡ, ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ನಿತೇಶ್ ಕೋಟ್ಯಾನ್, ನಿರ್ದೇಶಕ ವಿಶ್ವನಾಥ ಪೂಜಾರಿ ದಡ್ಡಲ್ ಪಲ್ಕೆ, ಸಲಹೆಗಾರ ರಮೇಶ್ ಪೂಜಾರಿ ಪದ್ಮಾಯಿಮಜಲು, ಸಂಘದ ನಿರ್ದೇಶಕರುಗಳಾದ ಸುರೇಶ್ ಪೂಜಾರಿ ಸುಮುಖ, ರವಿಂದ್ರ ಪೂಜಾರಿ ಪಾಲ್ವಲೈ, ನವೀನ್ ಪೂಜಾರಿ ಪಚೇರಿ, ಶೇಖರ್ ಪೂಜಾರಿ ಪರದ್ಯಾರ್, ಶಾಲಿನಿ ವಿಶ್ವನಾಥ್ ಉಪಸ್ಥಿತರಿದ್ದರು.

Leave a Comment

error: Content is protected !!