September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

ಕಡಿರುದ್ಯಾವರದಲ್ಲಿ ಕಾಡಾನೆ ಕಾಟ

ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬಸವದಡ್ಡು ಪ್ರದೇಶಗಳಲ್ಲಿ ಒಂಟಿ ಸಲಗ ಕೃಷಿ ತೋಟಗಳಿಗೆ ದಾಳಿ ಇಟ್ಟು ಹಾನಿ ಉಂಟು ಮಾಡಿದ ಘಟನೆ ಜು.16 ರಂದು ತಡರಾತ್ರಿ ನಡೆದಿದೆ.


ಇಲ್ಲಿನ ಶಂಕರ ಭಟ್, ಮಚ್ಚೇಂದ್ರ ನಾಯಕ್ ವಿಶ್ವನಾಥ ಪ್ರಭು, ಮಹೇಶ ಭಟ್, ನೀಲಯ್ಯ ಗೌಡ ರಾಮಚಂದ್ರ ಗೌಡ, ಪ್ರವೀಣ ಹಾಗೂ ಇನ್ನಿತರರ ತೋಟಗಳಿಗೆ ನುಗ್ಗಿದ ಸಲಗ ನೂರಾರು ಅಡಕೆ ಮರ ಬಾಳೆ ಗಿಡಗಳನ್ನು ಪುಡಿಗೈದಿದೆ.ಹಲಸಿನ ಮರದಲ್ಲಿದ್ದ ಹಲಸಿನ ಹಣ್ಣುಗಳನ್ನು ತೆಗೆದುಹಾಕಿ ದಾಂಧಲೆ ಎಬ್ಬಿಸಿದ ಕಾಡಾನೆ ಶಂಕರ ಭಟ್ ಅವರು ತೋಟದ ಬದಿಯಲ್ಲಿ ನಿರ್ಮಿಸಿದ್ದ ತಾತ್ಕಾಲಿಕ ಶೆಡ್ ನ್ನು ನೆಲಸಮಗೊಳಿಸಿದೆ.


ಸ್ಥಳೀಯರೊಬ್ಬರು ತೋಟದಲ್ಲಿ ಔಷಧಿ ತಯಾರಿಗಾಗಿ ಇಟ್ಟಿದ್ದ 200 ಲೀಟರ್ ಡ್ರಮ್ ನ್ನು ಆನೆ ಸಮೀಪದಲ್ಲಿ ಹರಿಯುವ ತೋಡಿಗೆ ದೂಡಿ ಹಾಕಿದ್ದು ಅದು ನೀರು ಪಾಲಾಗಿದೆ.


ಕಳೆದ ಹತ್ತು ದಿನಗಳಿಂದ ಕಾಡಾನೆ ಕಡಿರುದ್ಯಾವರ ಗ್ರಾಮದಲ್ಲಿ ಬೀಡು ಬಿಟ್ಟಿದ್ದು ಇಲ್ಲಿನ ರಾಮಂದೊಟ್ಟು, ಪಣಿಕಲ್ಲು, ಹಿತ್ತಿಲ ಕೋಡಿ,ಕೋಡಿ, ಎರುಬಳ್ಳಿ, ಕಾನರ್ಪ ಮುಂತಾದ ಪ್ರದೇಶಗಳ ಮನೆಗಳ ಅಂಗಳದ ತನಕವು ಬಂದಿತ್ತು.
ವಿಪರೀತ ಮಳೆ ಇರುವ ಕಾರಣ ಕಾಡಾನೆ ಮನೆ ಹತ್ತಿರ ಬಂದರೂ ತೋಟದಲ್ಲಿ ಹಾನಿ ಉಂಟುಮಾಡಿದರು ತಕ್ಷಣ ಗಮನಕ್ಕೆ ಬರುತ್ತಿಲ್ಲ ಪಟಾಕಿಗಳನ್ನು ಸಿಡಿಸಿದರು ಆನೆ ಓಡುತ್ತಿಲ್ಲ ಎಂದು ಇಲ್ಲಿನ ಕೃಷಿಕರು ತಿಳಿಸಿದ್ದಾರೆ.

Related posts

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

Suddi Udaya

ಬೆಳಾಲು ಎಸ್.ಡಿ.ಎಂ ಶಾಲೆ: ಅಭಿನಂದನಾ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಜೂ.28: ಬೆಳ್ತಂಗಡಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ-ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಮೂರು ಕಡೆ ಸಮಾರಂಭ

Suddi Udaya

ತೆಂಕಕಾರಂದೂರು: ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಸದಾನಂದ ಪೂಜಾರಿಯವರಿಗೆ ಸನ್ಮಾನ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಗೂ ಮಾಜಿ ಶಾಸಕ ಜೆ.ಆರ್ ಲೋಬೋ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya
error: Content is protected !!