23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

ಕಡಿರುದ್ಯಾವರದಲ್ಲಿ ಕಾಡಾನೆ ಕಾಟ

ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬಸವದಡ್ಡು ಪ್ರದೇಶಗಳಲ್ಲಿ ಒಂಟಿ ಸಲಗ ಕೃಷಿ ತೋಟಗಳಿಗೆ ದಾಳಿ ಇಟ್ಟು ಹಾನಿ ಉಂಟು ಮಾಡಿದ ಘಟನೆ ಜು.16 ರಂದು ತಡರಾತ್ರಿ ನಡೆದಿದೆ.


ಇಲ್ಲಿನ ಶಂಕರ ಭಟ್, ಮಚ್ಚೇಂದ್ರ ನಾಯಕ್ ವಿಶ್ವನಾಥ ಪ್ರಭು, ಮಹೇಶ ಭಟ್, ನೀಲಯ್ಯ ಗೌಡ ರಾಮಚಂದ್ರ ಗೌಡ, ಪ್ರವೀಣ ಹಾಗೂ ಇನ್ನಿತರರ ತೋಟಗಳಿಗೆ ನುಗ್ಗಿದ ಸಲಗ ನೂರಾರು ಅಡಕೆ ಮರ ಬಾಳೆ ಗಿಡಗಳನ್ನು ಪುಡಿಗೈದಿದೆ.ಹಲಸಿನ ಮರದಲ್ಲಿದ್ದ ಹಲಸಿನ ಹಣ್ಣುಗಳನ್ನು ತೆಗೆದುಹಾಕಿ ದಾಂಧಲೆ ಎಬ್ಬಿಸಿದ ಕಾಡಾನೆ ಶಂಕರ ಭಟ್ ಅವರು ತೋಟದ ಬದಿಯಲ್ಲಿ ನಿರ್ಮಿಸಿದ್ದ ತಾತ್ಕಾಲಿಕ ಶೆಡ್ ನ್ನು ನೆಲಸಮಗೊಳಿಸಿದೆ.


ಸ್ಥಳೀಯರೊಬ್ಬರು ತೋಟದಲ್ಲಿ ಔಷಧಿ ತಯಾರಿಗಾಗಿ ಇಟ್ಟಿದ್ದ 200 ಲೀಟರ್ ಡ್ರಮ್ ನ್ನು ಆನೆ ಸಮೀಪದಲ್ಲಿ ಹರಿಯುವ ತೋಡಿಗೆ ದೂಡಿ ಹಾಕಿದ್ದು ಅದು ನೀರು ಪಾಲಾಗಿದೆ.


ಕಳೆದ ಹತ್ತು ದಿನಗಳಿಂದ ಕಾಡಾನೆ ಕಡಿರುದ್ಯಾವರ ಗ್ರಾಮದಲ್ಲಿ ಬೀಡು ಬಿಟ್ಟಿದ್ದು ಇಲ್ಲಿನ ರಾಮಂದೊಟ್ಟು, ಪಣಿಕಲ್ಲು, ಹಿತ್ತಿಲ ಕೋಡಿ,ಕೋಡಿ, ಎರುಬಳ್ಳಿ, ಕಾನರ್ಪ ಮುಂತಾದ ಪ್ರದೇಶಗಳ ಮನೆಗಳ ಅಂಗಳದ ತನಕವು ಬಂದಿತ್ತು.
ವಿಪರೀತ ಮಳೆ ಇರುವ ಕಾರಣ ಕಾಡಾನೆ ಮನೆ ಹತ್ತಿರ ಬಂದರೂ ತೋಟದಲ್ಲಿ ಹಾನಿ ಉಂಟುಮಾಡಿದರು ತಕ್ಷಣ ಗಮನಕ್ಕೆ ಬರುತ್ತಿಲ್ಲ ಪಟಾಕಿಗಳನ್ನು ಸಿಡಿಸಿದರು ಆನೆ ಓಡುತ್ತಿಲ್ಲ ಎಂದು ಇಲ್ಲಿನ ಕೃಷಿಕರು ತಿಳಿಸಿದ್ದಾರೆ.

Related posts

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಮ್ಮೇಳನ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜು ಮತ್ತು ಎಸ್‌ಡಿಎಂ ಕ್ರೀಡಾ ಸಂಘದ ವತಿಯಿಂದ ಯೋಗ ಶಿಬಿರ ಉದ್ಘಾಟನೆ

Suddi Udaya

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

Suddi Udaya
error: Content is protected !!