July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

ಕಡಿರುದ್ಯಾವರದಲ್ಲಿ ಕಾಡಾನೆ ಕಾಟ

ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬಸವದಡ್ಡು ಪ್ರದೇಶಗಳಲ್ಲಿ ಒಂಟಿ ಸಲಗ ಕೃಷಿ ತೋಟಗಳಿಗೆ ದಾಳಿ ಇಟ್ಟು ಹಾನಿ ಉಂಟು ಮಾಡಿದ ಘಟನೆ ಜು.16 ರಂದು ತಡರಾತ್ರಿ ನಡೆದಿದೆ.


ಇಲ್ಲಿನ ಶಂಕರ ಭಟ್, ಮಚ್ಚೇಂದ್ರ ನಾಯಕ್ ವಿಶ್ವನಾಥ ಪ್ರಭು, ಮಹೇಶ ಭಟ್, ನೀಲಯ್ಯ ಗೌಡ ರಾಮಚಂದ್ರ ಗೌಡ, ಪ್ರವೀಣ ಹಾಗೂ ಇನ್ನಿತರರ ತೋಟಗಳಿಗೆ ನುಗ್ಗಿದ ಸಲಗ ನೂರಾರು ಅಡಕೆ ಮರ ಬಾಳೆ ಗಿಡಗಳನ್ನು ಪುಡಿಗೈದಿದೆ.ಹಲಸಿನ ಮರದಲ್ಲಿದ್ದ ಹಲಸಿನ ಹಣ್ಣುಗಳನ್ನು ತೆಗೆದುಹಾಕಿ ದಾಂಧಲೆ ಎಬ್ಬಿಸಿದ ಕಾಡಾನೆ ಶಂಕರ ಭಟ್ ಅವರು ತೋಟದ ಬದಿಯಲ್ಲಿ ನಿರ್ಮಿಸಿದ್ದ ತಾತ್ಕಾಲಿಕ ಶೆಡ್ ನ್ನು ನೆಲಸಮಗೊಳಿಸಿದೆ.


ಸ್ಥಳೀಯರೊಬ್ಬರು ತೋಟದಲ್ಲಿ ಔಷಧಿ ತಯಾರಿಗಾಗಿ ಇಟ್ಟಿದ್ದ 200 ಲೀಟರ್ ಡ್ರಮ್ ನ್ನು ಆನೆ ಸಮೀಪದಲ್ಲಿ ಹರಿಯುವ ತೋಡಿಗೆ ದೂಡಿ ಹಾಕಿದ್ದು ಅದು ನೀರು ಪಾಲಾಗಿದೆ.


ಕಳೆದ ಹತ್ತು ದಿನಗಳಿಂದ ಕಾಡಾನೆ ಕಡಿರುದ್ಯಾವರ ಗ್ರಾಮದಲ್ಲಿ ಬೀಡು ಬಿಟ್ಟಿದ್ದು ಇಲ್ಲಿನ ರಾಮಂದೊಟ್ಟು, ಪಣಿಕಲ್ಲು, ಹಿತ್ತಿಲ ಕೋಡಿ,ಕೋಡಿ, ಎರುಬಳ್ಳಿ, ಕಾನರ್ಪ ಮುಂತಾದ ಪ್ರದೇಶಗಳ ಮನೆಗಳ ಅಂಗಳದ ತನಕವು ಬಂದಿತ್ತು.
ವಿಪರೀತ ಮಳೆ ಇರುವ ಕಾರಣ ಕಾಡಾನೆ ಮನೆ ಹತ್ತಿರ ಬಂದರೂ ತೋಟದಲ್ಲಿ ಹಾನಿ ಉಂಟುಮಾಡಿದರು ತಕ್ಷಣ ಗಮನಕ್ಕೆ ಬರುತ್ತಿಲ್ಲ ಪಟಾಕಿಗಳನ್ನು ಸಿಡಿಸಿದರು ಆನೆ ಓಡುತ್ತಿಲ್ಲ ಎಂದು ಇಲ್ಲಿನ ಕೃಷಿಕರು ತಿಳಿಸಿದ್ದಾರೆ.

Related posts

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

Suddi Udaya

ಕೊಲ್ಪಾಡಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಪುನಾರಚನೆ: ಅಧ್ಯಕ್ಷರಾಗಿ ಲೋಕೇಶ್ ಓಣಾಜೆ ಆಯ್ಕೆ‌

Suddi Udaya

ಕಾಡಾನೆಗಳ ಓಡಾಟ: ಮಲವಂತಿಗೆ ಗ್ರಾಮ ಪಂಚಾಯತ್ ನಿಂದ ಎಚ್ಚರಿಕೆ

Suddi Udaya

ಧರ್ಮಸ್ಥಳದ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನ ಉದ್ಘಾಟನೆ

Suddi Udaya

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ಮುಂಡಾಜೆ ಅನುದಾನಿತ ಪ್ರೌಢಶಾಲೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!