July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಮಟಾ ನೆರೆಪೀಡಿತ ಪ್ರದೇಶಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತುರ್ತು ನೆರವು

ಬೆಳ್ತಂಗಡಿ: ಕುಮಟಾ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆ, ನೆರಹಾವಳಿ ಮತ್ತು ಗುಡ್ಡ ಕುಸಿತದ ಪರಿಣಾಮವಾಗಿ ಹಲವು ಮನೆಗಳು ಮುಳುಗಡೆಯಾಗಿದ್ದು ನೆರೆಪೀಡಿತ ಪ್ರದೇಶದ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿರುವ ಕುಟುಂಬಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತುರ್ತು ನೆರವು ನೀಡಲಾಯಿತು.

ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು ಈ ಬಗ್ಗೆ ಮಾಹಿತಿ ಪಡೆದುಕೊಂಡು ಸುಮಾರು 80 ಜನರಿಗೆ ತುರ್ತಾಗಿ ಬೇಕಾದ ಚಾಪೆ, ಬೆಡ್ ಶೀಟ್ ಹಾಗೂ ಅಗತ್ಯ ವಸ್ತುಗಳ ವ್ಯವಸ್ಥೆಯನ್ನು ಮಾಡಿದ್ದಾರೆ.

ಈ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ವಸ್ತುಗಳನ್ನು ನೀಡಿ ಜನರಿಗೆ ಧೈರ್ಯ ತುಂಬಿದ್ದಾರೆ.

Related posts

ಬೆಳ್ತಂಗಡಿ ಹಾಗೂ ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ: ಬೆಳ್ತಂಗಡಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ರೆಖ್ಯ ಗ್ರಾಮದ ಸರ್ವೆ ನಂ:69/1 ರಲ್ಲಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಗಳು ನಡೆಸಿದ ಜಂಟಿ ಸರ್ವೆ ಪೂರ್ಣ: ಸೂಕ್ತ ಆದೇಶ ನೀಡುವಂತೆ ಶಾಸಕ ಹರೀಶ್ ಪೂಂಜರಿಂದ ಸಚಿವ ಈಶ್ವರ ಖಂಡ್ರೆರವರಿಗೆ ಮನವಿ

Suddi Udaya

ಲಾಯಿಲ: ಪುತ್ರ ಬೈಲು ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಸಂಬಂಧಿಸಿದ ಕಡಿರ ನಾಗಬನದಲ್ಲಿ ನೂತನ ನಾಗನಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ : ರಕ್ಷಿತ್ ಶಿವರಾಂ

Suddi Udaya
error: Content is protected !!