ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕುವೆಟ್ಟು: ಕರ್ತವ್ಯ ಲೋಪ ಎಸಗಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ: ಸಾಮಾನ್ಯ ಸಭೆ ಬಹಿಷ್ಕರಿಸಿದ ಸದಸ್ಯರು

ಬೆಳ್ತಂಗಡಿ: ಕರ್ತವ್ಯ ಲೋಪ ಎಸಗಿದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇಮ್ಮಿಯಾಜ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗ್ರಾ.ಪಂ. ಸದಸ್ಯರು ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿದ ಘಟನೆ ಜು.15ರಂದು ಕುವೆಟ್ಟು ಗ್ರಾ.ಪಂ.ನಲ್ಲಿ ನಡೆದಿದೆ.

ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಇಮ್ಮಿಯಾಜ್ ರವರು ಪಂಚಾಯತ್‌ ನ ಎಲ್ಲಾ ನಿರ್ಣಯಗಳನ್ನು ಮೀರಿ ಅಧಿಕಾರ ದುರುಪಯೋಗ ಮಾಡಿ ಕರ್ತವ್ಯ ಲೋಪ ಎಸಗಿದ್ದಾರೆ. ಅಲ್ಲದೇ ಆಡಳಿತ ಮಂಡಳಿಯ ಸದಸ್ಯರ ಹಕ್ಕು ಚ್ಯುತಿ ಮಾಡಿದ್ದಾರೆ ಎಂದು ಆರೋಪಿಸಿ ಗ್ರಾಮ ಪಂಚಾಯತ್‌ 24 ಸದಸ್ಯರ ಪೈಕಿ 18 ಮಂದಿ ಸದಸ್ಯರು ಸಭೆ ಬಹಿಷ್ಕರಿಸಿದರು.

ಗ್ರಾ.ಪಂ.ಅಧ್ಯಕ್ಷೆ ಭಾರತಿ ಎಸ್.ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ಹಾಜರಾಗಿದ್ದ ಗಣೇಶ್ ಕೆ., ವೇದಾವತಿ, ಲಕ್ಷ್ಮೀಶ, ಆನಂದಿ, ವನಿತಾ, ವಿಜಯಲಕ್ಷ್ಮೀ, ಸದಾನಂದ ಮೂಲ್ಯ, ನಿತೇಶ್, ನಿತಿನ್, ಮಂಜುನಾಥ್, ರಚನಾ, ಪ್ರದೀಪ್ ಶೆಟ್ಟಿ, ಹೇಮಂತ್, ಉಷಾ, ಶಾಲಿನಿ, ಸುಮಂಗಲಾ, ಸಿಲ್ವೆಸ್ಟರ್ ಮೋನಿಸ್, ಆಶಾಲತಾ ಸಭೆಯನ್ನು ಬಹಿಷ್ಕರಿಸಿದರು.

ಆದರೆ ಸದಸ್ಯರಾದ ಮೈಮುನಿಸಾ, ಮಹಮ್ಮದ್ ಮುಸ್ತಾಫ, ಅಮಿನಾ, ಶಮೀಮುಲಾ ಕೆ. ಸಭೆಯಲ್ಲಿ ಮುಂದುವರಿದರು.ಆದರೆ ಕೋರಂ ಕೊರತೆ ಉಂಟಾದ ಹಿನ್ನಲೆಯಲ್ಲಿ ಅಧ್ಯಕ್ಷೆ ಭಾರತಿ ಎಸ್.ಶೆಟ್ಟಿ ಸಭೆಯನ್ನು ಮುಂದೂಡಿದರು.

Related posts

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

Suddi Udaya

ಫೋಟೊಗ್ರಾಫಿ ಸ್ಫರ್ಧೆ: ಡಾ. ಚಂದ್ರಹಾಸ್ ಚಾರ್ಮಾಡಿ ಪ್ರಥಮ

Suddi Udaya

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯದಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

Suddi Udaya

ಭಾರಿ ಗಾಳಿ ಮಳೆ: ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರುನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
error: Content is protected !!