26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕುವೆಟ್ಟು: ಕರ್ತವ್ಯ ಲೋಪ ಎಸಗಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ: ಸಾಮಾನ್ಯ ಸಭೆ ಬಹಿಷ್ಕರಿಸಿದ ಸದಸ್ಯರು

ಬೆಳ್ತಂಗಡಿ: ಕರ್ತವ್ಯ ಲೋಪ ಎಸಗಿದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇಮ್ಮಿಯಾಜ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗ್ರಾ.ಪಂ. ಸದಸ್ಯರು ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿದ ಘಟನೆ ಜು.15ರಂದು ಕುವೆಟ್ಟು ಗ್ರಾ.ಪಂ.ನಲ್ಲಿ ನಡೆದಿದೆ.

ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಇಮ್ಮಿಯಾಜ್ ರವರು ಪಂಚಾಯತ್‌ ನ ಎಲ್ಲಾ ನಿರ್ಣಯಗಳನ್ನು ಮೀರಿ ಅಧಿಕಾರ ದುರುಪಯೋಗ ಮಾಡಿ ಕರ್ತವ್ಯ ಲೋಪ ಎಸಗಿದ್ದಾರೆ. ಅಲ್ಲದೇ ಆಡಳಿತ ಮಂಡಳಿಯ ಸದಸ್ಯರ ಹಕ್ಕು ಚ್ಯುತಿ ಮಾಡಿದ್ದಾರೆ ಎಂದು ಆರೋಪಿಸಿ ಗ್ರಾಮ ಪಂಚಾಯತ್‌ 24 ಸದಸ್ಯರ ಪೈಕಿ 18 ಮಂದಿ ಸದಸ್ಯರು ಸಭೆ ಬಹಿಷ್ಕರಿಸಿದರು.

ಗ್ರಾ.ಪಂ.ಅಧ್ಯಕ್ಷೆ ಭಾರತಿ ಎಸ್.ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ಹಾಜರಾಗಿದ್ದ ಗಣೇಶ್ ಕೆ., ವೇದಾವತಿ, ಲಕ್ಷ್ಮೀಶ, ಆನಂದಿ, ವನಿತಾ, ವಿಜಯಲಕ್ಷ್ಮೀ, ಸದಾನಂದ ಮೂಲ್ಯ, ನಿತೇಶ್, ನಿತಿನ್, ಮಂಜುನಾಥ್, ರಚನಾ, ಪ್ರದೀಪ್ ಶೆಟ್ಟಿ, ಹೇಮಂತ್, ಉಷಾ, ಶಾಲಿನಿ, ಸುಮಂಗಲಾ, ಸಿಲ್ವೆಸ್ಟರ್ ಮೋನಿಸ್, ಆಶಾಲತಾ ಸಭೆಯನ್ನು ಬಹಿಷ್ಕರಿಸಿದರು.

ಆದರೆ ಸದಸ್ಯರಾದ ಮೈಮುನಿಸಾ, ಮಹಮ್ಮದ್ ಮುಸ್ತಾಫ, ಅಮಿನಾ, ಶಮೀಮುಲಾ ಕೆ. ಸಭೆಯಲ್ಲಿ ಮುಂದುವರಿದರು.ಆದರೆ ಕೋರಂ ಕೊರತೆ ಉಂಟಾದ ಹಿನ್ನಲೆಯಲ್ಲಿ ಅಧ್ಯಕ್ಷೆ ಭಾರತಿ ಎಸ್.ಶೆಟ್ಟಿ ಸಭೆಯನ್ನು ಮುಂದೂಡಿದರು.

Related posts

ಉಜಿರೆಯ ಕಿರಣ್ ಆಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್ ಯಂತ್ರದ ಕೊಡುಗೆ

Suddi Udaya

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

Suddi Udaya

ಅಳದಂಗಡಿಯಲ್ಲಿ ಭೀಕರ ರಸ್ತೆ ಅಪಘಾತ, ಮುಖ್ಯ ರಸ್ತೆಯಲ್ಲಿ ಅಡ್ಡ ಬಂದ ಮಹಿಳೆ: ರಕ್ಷಿಸಲೆತ್ನಿಸಿದ ಟೆಂಪೋ ಟ್ರಾವೆಲ್ಲರ್ ಪಲ್ಟಿ,ದೊಡ್ಡ ದುರಂತ ತಪ್ಪಿಸಿದ ಡ್ರೈವರ್

Suddi Udaya

ತೆಕ್ಕಾರು : ಸರಳಿಕಟ್ಟೆ ನದಿ ಬಳಿ ಕಾಡಾನೆ ಪ್ರತ್ಯಕ್ಷ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!