25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕುವೆಟ್ಟು: ಕರ್ತವ್ಯ ಲೋಪ ಎಸಗಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ: ಸಾಮಾನ್ಯ ಸಭೆ ಬಹಿಷ್ಕರಿಸಿದ ಸದಸ್ಯರು

ಬೆಳ್ತಂಗಡಿ: ಕರ್ತವ್ಯ ಲೋಪ ಎಸಗಿದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇಮ್ಮಿಯಾಜ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗ್ರಾ.ಪಂ. ಸದಸ್ಯರು ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿದ ಘಟನೆ ಜು.15ರಂದು ಕುವೆಟ್ಟು ಗ್ರಾ.ಪಂ.ನಲ್ಲಿ ನಡೆದಿದೆ.

ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಇಮ್ಮಿಯಾಜ್ ರವರು ಪಂಚಾಯತ್‌ ನ ಎಲ್ಲಾ ನಿರ್ಣಯಗಳನ್ನು ಮೀರಿ ಅಧಿಕಾರ ದುರುಪಯೋಗ ಮಾಡಿ ಕರ್ತವ್ಯ ಲೋಪ ಎಸಗಿದ್ದಾರೆ. ಅಲ್ಲದೇ ಆಡಳಿತ ಮಂಡಳಿಯ ಸದಸ್ಯರ ಹಕ್ಕು ಚ್ಯುತಿ ಮಾಡಿದ್ದಾರೆ ಎಂದು ಆರೋಪಿಸಿ ಗ್ರಾಮ ಪಂಚಾಯತ್‌ 24 ಸದಸ್ಯರ ಪೈಕಿ 18 ಮಂದಿ ಸದಸ್ಯರು ಸಭೆ ಬಹಿಷ್ಕರಿಸಿದರು.

ಗ್ರಾ.ಪಂ.ಅಧ್ಯಕ್ಷೆ ಭಾರತಿ ಎಸ್.ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ಹಾಜರಾಗಿದ್ದ ಗಣೇಶ್ ಕೆ., ವೇದಾವತಿ, ಲಕ್ಷ್ಮೀಶ, ಆನಂದಿ, ವನಿತಾ, ವಿಜಯಲಕ್ಷ್ಮೀ, ಸದಾನಂದ ಮೂಲ್ಯ, ನಿತೇಶ್, ನಿತಿನ್, ಮಂಜುನಾಥ್, ರಚನಾ, ಪ್ರದೀಪ್ ಶೆಟ್ಟಿ, ಹೇಮಂತ್, ಉಷಾ, ಶಾಲಿನಿ, ಸುಮಂಗಲಾ, ಸಿಲ್ವೆಸ್ಟರ್ ಮೋನಿಸ್, ಆಶಾಲತಾ ಸಭೆಯನ್ನು ಬಹಿಷ್ಕರಿಸಿದರು.

ಆದರೆ ಸದಸ್ಯರಾದ ಮೈಮುನಿಸಾ, ಮಹಮ್ಮದ್ ಮುಸ್ತಾಫ, ಅಮಿನಾ, ಶಮೀಮುಲಾ ಕೆ. ಸಭೆಯಲ್ಲಿ ಮುಂದುವರಿದರು.ಆದರೆ ಕೋರಂ ಕೊರತೆ ಉಂಟಾದ ಹಿನ್ನಲೆಯಲ್ಲಿ ಅಧ್ಯಕ್ಷೆ ಭಾರತಿ ಎಸ್.ಶೆಟ್ಟಿ ಸಭೆಯನ್ನು ಮುಂದೂಡಿದರು.

Related posts

ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾ ಶಕ್ತಿಕೇಂದ್ರ ವತಿಯಿಂದ ನಮನ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ

Suddi Udaya

ಕೊಕ್ರಾಡಿ: ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya

ಎ.12: ಬೆಳ್ತಂಗಡಿ ಟೀಮ್ ನವಭಾರತ್ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಹಾಗೂ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ: ಹುಟ್ಟೂರಲ್ಲಿ ಬಂಗೇರರ ವೃತ್ತ ಮತ್ತು ಪುತ್ಥಳಿ ನಿರ್ಮಾಣ: ಜಯವಿಕ್ರಮ್ ಕಲ್ಲಾಪು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya
error: Content is protected !!