25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

ಕುವೆಟ್ಟು : ಮದ್ದಡ್ಕ ಆಲಂದಿಲ ಸಬರಬೈಲು ಸಂಪರ್ಕ ರಸ್ತೆಯ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ನೀರು ರಸ್ತೆಯಲ್ಲೆ ಹರಿಯುತ್ತಿದ್ದು ಸಂಚಾರಕ್ಕೆ ತೊಡಕಾಗಿದೆ.

ಈ ಪರಿಸರದಲ್ಲಿ ಚಿಕ್ಕದಾದ ಕಾಲು ಸಂಕ ಇದ್ದು ರಸ್ತೆಯ ಎರಡು ಬದಿಯಲ್ಲಿ ಚರಂಡಿಯಲ್ಲಿ ಮಣ್ಣು ತುಂಬಿದ್ದು ಸರಾಗವಾಗಿ ಹರಿದು ಹೋಗಬೇಕಾಗಿದ್ದ ನೀರು ಚರಂಡಿಯಲ್ಲಿ ಮಣ್ಣು ತುಂಬಿ ಈಗ ರಸ್ತೆಯಲ್ಲಿ ಹರಿದು ಹೋಗುತ್ತಿದೆ. ಸಮೀಪದಲ್ಲಿ ಮದರಸ ಇದ್ದು ಚಿಕ್ಕ ಚಿಕ್ಕ ಮಕ್ಕಳು ಸ್ಥಳೀಯ ಶಾಲೆಗೆ ಹೋಗುವ ಮಕ್ಕಳು ಈ ರಸ್ತೆಯಲ್ಲಿ ಸಾಗಬೇಕಾಗಿದೆ ರಸ್ತೆಯು ಮೂಡಬಿದ್ರೆ ಕಡೆ ಸಾಗುವ ಪ್ರಯಾಣಿಕರು ಪಡಂಗಡಿ ಪೊಯ್ಯೆ ಗುಡ್ಡೆ ಸಂಪರ್ಕವಾಗಿ ಹೆಚ್ಚಿನ ವಾಹನಗಳು ಈ ರಸ್ತೆಯನ್ನು ಅವಲಂಬಿಸಿದ್ದು ಕಿರಿದಾದ ಈ ರಸ್ತೆಯಲ್ಲಿ ಎದುರು ಕಡೆಯಿಂದ ಬರುವ ವಾಹನಗಳಿಗೆ ಸೈಡ್ ಕೊಡಲು ನಿಲ್ಲಿಸಿಯೇ ಹೋಗುವ ಅನಿವಾರ್ಯಕ್ಕೆ ವಾಹನ ಚಾಲಕರು ಸಿಲುಕಿದ್ದಾರೆ.

ಸಂಬಂಧಿತ ಇಲಾಖೆ ಜನಪ್ರತಿನಿಧಿಗಳು ಗಮನಿಸಿ ಶೀಘ್ರವಾಗಿ ಇದಕ್ಕೆ ಸ್ಪಂದನೆ ನೀಡಬೇಕಾಗಿ ಸಾರ್ವಜನಿಕರ ಅಗ್ರಹ ವ್ಯಕ್ತ ಪಡಿಸಿದ್ದಾರೆ.

Related posts

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡಿಕಟ್ಟೆ ಮೊಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ

Suddi Udaya

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಜೂ.21: ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

Suddi Udaya

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!