September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಾಯದಂಚಿನಲ್ಲಿರುವ ತೋಟತ್ತಾಡಿಯ ಸೇತುವೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಆಗ್ರಹ

ಚಾರ್ಮಾಡಿ ಗ್ರಾಮದ ತೋಟತ್ತಾಡಿಯ ಮುಖ್ಯ ರಸ್ತೆಯ ಸೇತುವೆಯ ಅಪಾಯದ ಹಂಚಿನಲ್ಲಿದ್ದು ದುರಸ್ತಿಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕಳೆದ 70 ವರ್ಷಗಳಲ್ಲಿ ಇರುವಂತಹ ಸೇತುವೆಯು ಮಳೆಗೆ ಹಾನಿಯಾಗಿದ್ದು ಪಂಚಾಯತಿ ಸದಸ್ಯರು ಹಾಗೂ ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಸದಸ್ಯರು ದುರಸ್ತಿಪಡಿಸುವ ಯಾವುದೇ ಕೆಲಸಗಳನ್ನು ಮಾಡದೆ ಕೇವಲ ಪೊಳ್ಳು ಭರವಸೆಯನ್ನು ನೀಡಿದ್ದಾರೆ.

ಇದೀಗ ಈ ಸೇತುವೆ ಅಪಾಯದಲ್ಲಿದ್ದು ಶಾಲೆ, ಕಾಲೇಜು ಹಾಗೂ ದೈನಂದಿನ ಕೆಲಸಕ್ಕೆ ಹೋಗುವಂತಹ ಜನರು ಈ ಸೇತುವೆ ಮೇಲೆ ಹೋಗುವಾಗ ಜೀವ ಭಯದಲ್ಲಿ ಜೀವವನ್ನು ಕೈಯಲ್ಲಿ ಹಿಡಿದು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಆದ್ದರಿಂದ ಅನಾಹುತ ಆಗುವ ಮೊದಲೇ ಇದಕ್ಕೆ ಸಂಬಂಧಪಟ್ಟ ಪಂಚಾಯಿತಿ ಸದಸ್ಯರು ಹಾಗೂ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಹಾಗೂ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಇದಕ್ಕೊಂದು ಶಾಶ್ವತವಾದ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

Suddi Udaya

ಕರಾಟೆ ಪಂದ್ಯಾಟ: ದಿವ್ಯ ಜ್ಯೋತಿ ಆಂ.ಮಾ. ಶಾಲೆ ಕಾಯರ್ತಡ್ಕ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ರೇಪ್ ಕೇಸ್ ವಿಚಾರವಾಗಿ ನಕಲಿ ಕರೆ: ಪಟ್ರಮೆಯ ದಂಪತಿಯಿಂದ ಕರೆ ಮಾಡಿದ ವಂಚಕನಿಗೆ ತರಾಟೆ

Suddi Udaya

ಮುಳಿಯ ಸಂಸ್ಥೆಯ ದಿಗ್ದರ್ಶಕರಾದ ಸುಲೋಚನಾ ಶ್ಯಾಮ್ ಭಟ್ ಮುಳಿಯ ನಿಧನ : ಮುಳಿಯ ಗೋಲ್ಡ್ & ಡೈಮಂಡ್ ಸಂಸ್ಥೆಯ ಎಲ್ಲಾ ಶಾಖೆಗಳಿಗೆ ಆ. 29 ರಂದು ರಜೆ

Suddi Udaya

ಮುಂಡಾಜೆಯ ತಿರುವಿನ ಬಳಿ ಮೋರಿಗೆ ಜಾರಿದ ಕಾರು

Suddi Udaya
error: Content is protected !!