24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಉಜಿರೆ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ಉಜಿರೆಯ ಕರ್ನಾಟಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (BCM) ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿತು.

ಜೆಸಿಐ ಭಾರತದ ಅಮೃತ ಮಹೋತ್ಸವದ ಪ್ರಯುಕ್ತ ನಡೆಯುತ್ತಿರುವ ಸರಣಿ ತರಬೇತಿ ಕಾರ್ಯಕ್ರಮವನ್ನು, ಗ್ರಾಮ ಪಂಚಾಯತ್ ಉಜಿರೆಯ ಉಪಾಧ್ಯಕ್ಷ ರವಿ ಪೂಜಾರಿ ಬರಮೇಲು ಕಾರ್ಯಕ್ರಮವನ್ನು ಉದ್ಘಾಟಿಸಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಕಾರ್ಯಕ್ರಮಗಳಿಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ವಲಯ ತರಬೇತುದರರು, ಘಟಕದ ಉಪಾಧ್ಯಕ್ಷರಾದ ಹೇಮಾವತಿ ಕೆ ಇವರು ತರಬೇತಿಯನ್ನು ಅತ್ಯುತಮವಾಗಿ ನಡೆಸಿಕೊಟ್ಟರು. 40 ವಿದ್ಯಾರ್ಥಿನಿಯರು ತರಬೇತಿಯಲ್ಲಿ ಭಾಗವಹಿಸಿದರು .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ ವಹಿಸಿ, ಜೀವನದಲ್ಲಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ತರಬೇತಿಯ ಮಹತ್ವ ವನ್ನು ವಿವರಿಸಿ ಎಲ್ಲರನ್ನು ಸ್ವಾಗತಿಸಿದರು.

ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ಚಂದ್ರಪ್ಪ ಡಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ತರಬೇತಿಯನ್ನು ಆಯೋಜನೆ ಮಾಡಿದ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕಕ್ಕೆ ಧನ್ಯವಾದ ಸಲ್ಲಿಸಿದರು.

ವೇದಿಕೆ ಆಹ್ವಾನವನ್ನು ಜೊತೆ ಕಾರ್ಯದರ್ಶಿಗಳಾದ ಪ್ರಮೋದ್ ಕೆ, ಜೆಸಿ ವಾಣಿಯನ್ನು ಜೆಜೆಸಿ ಅಧ್ಯಕ್ಷರಾದ ಸಮನ್ವೀತ್ ಕುಮಾರ್ ವಾಚಿಸಿದರು.

ಕಾರ್ಯಕ್ರಮದಲ್ಲಿ ಪೂರ್ವಧ್ಯಕ್ಷರಾದ ಪ್ರಸಾದ್ ಬಿ ಎಸ್ ಭಾಗವಹಿಸಿದರು. ಕಾರ್ಯದರ್ಶಿಗಳಾದ ಅನದೀಪ್ ಜೈನ್ ಇವರ ಧನ್ಯವಾದದೊಂದಿಗೆ ತರಬೇತಿ ಕಾರ್ಯಕ್ರಮ ಮುಕ್ತಯವಾಯಿತು.

Related posts

ಪೆರ್ಲ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಾಧವ ಗೌಡ ಖಂಡಿಗ ರವರಿಂದ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಕಲ್ಮಂಜದಲ್ಲಿ ಬಿಜೆಪಿ ಕಾರ್ಯಕರ್ತರ‌ ವಿಜಯೋತ್ಸವ

Suddi Udaya

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

Suddi Udaya

ವೇಣೂರು: ಕೃಷಿಕ ಕೆ. ಹಸನಬ್ಬ ನಿಧನ

Suddi Udaya
error: Content is protected !!