July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಉಜಿರೆ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ಉಜಿರೆಯ ಕರ್ನಾಟಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (BCM) ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿತು.

ಜೆಸಿಐ ಭಾರತದ ಅಮೃತ ಮಹೋತ್ಸವದ ಪ್ರಯುಕ್ತ ನಡೆಯುತ್ತಿರುವ ಸರಣಿ ತರಬೇತಿ ಕಾರ್ಯಕ್ರಮವನ್ನು, ಗ್ರಾಮ ಪಂಚಾಯತ್ ಉಜಿರೆಯ ಉಪಾಧ್ಯಕ್ಷ ರವಿ ಪೂಜಾರಿ ಬರಮೇಲು ಕಾರ್ಯಕ್ರಮವನ್ನು ಉದ್ಘಾಟಿಸಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಕಾರ್ಯಕ್ರಮಗಳಿಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ವಲಯ ತರಬೇತುದರರು, ಘಟಕದ ಉಪಾಧ್ಯಕ್ಷರಾದ ಹೇಮಾವತಿ ಕೆ ಇವರು ತರಬೇತಿಯನ್ನು ಅತ್ಯುತಮವಾಗಿ ನಡೆಸಿಕೊಟ್ಟರು. 40 ವಿದ್ಯಾರ್ಥಿನಿಯರು ತರಬೇತಿಯಲ್ಲಿ ಭಾಗವಹಿಸಿದರು .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ ವಹಿಸಿ, ಜೀವನದಲ್ಲಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ತರಬೇತಿಯ ಮಹತ್ವ ವನ್ನು ವಿವರಿಸಿ ಎಲ್ಲರನ್ನು ಸ್ವಾಗತಿಸಿದರು.

ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ಚಂದ್ರಪ್ಪ ಡಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ತರಬೇತಿಯನ್ನು ಆಯೋಜನೆ ಮಾಡಿದ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕಕ್ಕೆ ಧನ್ಯವಾದ ಸಲ್ಲಿಸಿದರು.

ವೇದಿಕೆ ಆಹ್ವಾನವನ್ನು ಜೊತೆ ಕಾರ್ಯದರ್ಶಿಗಳಾದ ಪ್ರಮೋದ್ ಕೆ, ಜೆಸಿ ವಾಣಿಯನ್ನು ಜೆಜೆಸಿ ಅಧ್ಯಕ್ಷರಾದ ಸಮನ್ವೀತ್ ಕುಮಾರ್ ವಾಚಿಸಿದರು.

ಕಾರ್ಯಕ್ರಮದಲ್ಲಿ ಪೂರ್ವಧ್ಯಕ್ಷರಾದ ಪ್ರಸಾದ್ ಬಿ ಎಸ್ ಭಾಗವಹಿಸಿದರು. ಕಾರ್ಯದರ್ಶಿಗಳಾದ ಅನದೀಪ್ ಜೈನ್ ಇವರ ಧನ್ಯವಾದದೊಂದಿಗೆ ತರಬೇತಿ ಕಾರ್ಯಕ್ರಮ ಮುಕ್ತಯವಾಯಿತು.

Related posts

ಸಿ ಎಸ್ ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅದ್ವಿತೀಯ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya

ತೋಟತ್ತಾಡಿ: ಹತ್ತು ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅನಿಲ್ ಕಕ್ಕಿಂಜೆ

Suddi Udaya

ಕನ್ಯಾಡಿII ಸ.ಉ.ಹಿ.ಪ್ರಾ. ಶಾಲೆಗೆ ಪೆಟ್ರೋನೆಟ್ ಎಂ.ಹೆಚ್.ಬಿ ಲಿಮಿಟೆಡ್ ಕಂಪನಿಯಿಂದ ಕಂಪ್ಯೂಟರ್ ಮತ್ತು ಕಂಪ್ಯೂಟರ್ ಟೇಬಲ್ ಕೊಡುಗೆ

Suddi Udaya

ಅರಣ್ಯ ಇಲಾಖೆ ಬುಡಕಟ್ಟು ಸಮುದಾಯದ ಜೊತೆಗೆ ಸರ್ಕಾರವನ್ನು ಕೂಡ ವಂಚಿಸುತ್ತಿದೆ : ಹರೀಶ್ ಎಳನೀರ್

Suddi Udaya

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ

Suddi Udaya
error: Content is protected !!