23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಉಜಿರೆ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ಉಜಿರೆಯ ಕರ್ನಾಟಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (BCM) ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿತು.

ಜೆಸಿಐ ಭಾರತದ ಅಮೃತ ಮಹೋತ್ಸವದ ಪ್ರಯುಕ್ತ ನಡೆಯುತ್ತಿರುವ ಸರಣಿ ತರಬೇತಿ ಕಾರ್ಯಕ್ರಮವನ್ನು, ಗ್ರಾಮ ಪಂಚಾಯತ್ ಉಜಿರೆಯ ಉಪಾಧ್ಯಕ್ಷ ರವಿ ಪೂಜಾರಿ ಬರಮೇಲು ಕಾರ್ಯಕ್ರಮವನ್ನು ಉದ್ಘಾಟಿಸಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಕಾರ್ಯಕ್ರಮಗಳಿಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ವಲಯ ತರಬೇತುದರರು, ಘಟಕದ ಉಪಾಧ್ಯಕ್ಷರಾದ ಹೇಮಾವತಿ ಕೆ ಇವರು ತರಬೇತಿಯನ್ನು ಅತ್ಯುತಮವಾಗಿ ನಡೆಸಿಕೊಟ್ಟರು. 40 ವಿದ್ಯಾರ್ಥಿನಿಯರು ತರಬೇತಿಯಲ್ಲಿ ಭಾಗವಹಿಸಿದರು .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ ವಹಿಸಿ, ಜೀವನದಲ್ಲಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ತರಬೇತಿಯ ಮಹತ್ವ ವನ್ನು ವಿವರಿಸಿ ಎಲ್ಲರನ್ನು ಸ್ವಾಗತಿಸಿದರು.

ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ಚಂದ್ರಪ್ಪ ಡಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ತರಬೇತಿಯನ್ನು ಆಯೋಜನೆ ಮಾಡಿದ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕಕ್ಕೆ ಧನ್ಯವಾದ ಸಲ್ಲಿಸಿದರು.

ವೇದಿಕೆ ಆಹ್ವಾನವನ್ನು ಜೊತೆ ಕಾರ್ಯದರ್ಶಿಗಳಾದ ಪ್ರಮೋದ್ ಕೆ, ಜೆಸಿ ವಾಣಿಯನ್ನು ಜೆಜೆಸಿ ಅಧ್ಯಕ್ಷರಾದ ಸಮನ್ವೀತ್ ಕುಮಾರ್ ವಾಚಿಸಿದರು.

ಕಾರ್ಯಕ್ರಮದಲ್ಲಿ ಪೂರ್ವಧ್ಯಕ್ಷರಾದ ಪ್ರಸಾದ್ ಬಿ ಎಸ್ ಭಾಗವಹಿಸಿದರು. ಕಾರ್ಯದರ್ಶಿಗಳಾದ ಅನದೀಪ್ ಜೈನ್ ಇವರ ಧನ್ಯವಾದದೊಂದಿಗೆ ತರಬೇತಿ ಕಾರ್ಯಕ್ರಮ ಮುಕ್ತಯವಾಯಿತು.

Related posts

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹಸಂಸ್ಥೆ ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ಉದ್ಘಾಟನೆ

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

Suddi Udaya

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

Suddi Udaya

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya
error: Content is protected !!