ಬಂದಾರು ಗ್ರಾಮದ ಮೈರೋಳ್ತಡ್ಕ,ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದ ಗುಡ್ಡ ಕುಸಿತ ರಸ್ತೆ ಸಂಚಾರ ಬಂದ್

Suddi Udaya

ಬಂದಾರು : ಜು 18 ಬಂದಾರು ಗ್ರಾಮದ ಮೈರೋಳ್ತಡ್ಕ,ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದಲ್ಲಿ ರಾತ್ರಿ ಸುರಿದ ವಿಪರೀತ ಮಳೆಯ ಪರಿಣಾಮ ಗುಡ್ಡ ಕುಸಿದು ಈ ರಸ್ತೆಯ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ ಸ್ಥಳಕ್ಕೆ
ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ರವರು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಮುಗ್ರೋಡಿ ಕನ್ ಸ್ಟ್ರಕ್ಷನ್ ನವರಿಗೆ ತಿಳಿಸಿದಾಗ ಮಣ್ಣು ತೆರವು ಕಾರ್ಯಕ್ಕೆ ಸ್ಥಳಕ್ಕೆ ಜೆಸಿಬಿ, ಟಿಪ್ಪರ್ ಕಳುಹಿಸಿಕೊಡುವುದಾಗಿ ತಿಳಿಸಿರುತ್ತಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದೆ ಸ್ಥಳದಲ್ಲಿ ಇನ್ನಷ್ಟು ಭಾರಿ ಗಾತ್ರ ಗುಡ್ಡ ಕುಸಿಯುವ ಲಕ್ಷಣ ಕಾಣಿಸ್ತಾ ಇದೆ, ಈ ಭಾಗದಲ್ಲಿ ಸಂಚರಿಸುವವರು ಸ್ವಲ್ಪ ಎಚ್ಚರಿಕೆಯಿಂದ ಸಂಚಾರಿಸಬೇಕಾಗಿದೆ ಸoಬoಧಪಟ್ಟ ಇಲಾಖೆಯು ಇದರ ಬಗ್ಗೆ ಸೂಕ್ತ ವ್ಯವಸ್ಥೆ ಮಾಡಬೇಕಾಗಿ ನಾಗರಿಕರ ಒಕ್ಕೊರಲ ಆಗ್ರಹವಾಗಿದೆ,
ಜೂನ್ ತಿಂಗಳಲ್ಲಿ ಇದೆ ಸ್ಥಳದಲ್ಲಿ ಮಣ್ಣು ಕುಸಿತ ಉಂಟಾಗಿರುವ ವರದಿಯಾಗಿತ್ತು.

Leave a Comment

error: Content is protected !!