September 6, 2026
Uncategorized

ಬೆಳ್ತಂಗಡಿ : ಕಾಮಗಾರಿ ಕೆಲಸಕ್ಕೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಕಾಮಗಾರಿ ಕೆಲಸಕ್ಕೆ ಬೇರೆ ರಾಜ್ಯದಿಂದ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣವನ್ನು ಬೆಳ್ತಂಗಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚಲಾಗಿದೆ.

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಬಳಿಯ ಕಟ್ಟಡ ಕೆಲಸಕ್ಕೆ ಕಲ್ಕತ್ತಾ ಮೂಲದ ದಂಪತಿಗಳಾದ ಮುಷರಫ್ ಮತ್ತು ರೀಮಾ(24) ಬಂದಿದ್ದು. ಪತ್ನಿ ರೀಮಾ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಜು.8 ರಂದು ಹೋಗಿದ್ದು ಬಳಿಕ ವಾಪಸ್ ಬರದೆ ಇದ್ದ ಬಗ್ಗೆ ಪತಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜು.8 ರಂದು ನಾಪತ್ತೆ ದೂರು ನೀಡಿದ್ದರು‌.

ಬೆಳ್ತಂಗಡಿ ಪೊಲೀಸ್ ನಾಪತ್ತೆ ಪ್ರಕರಣ ಜಾಡು ಹಿಡಿದು ಟೆಕ್ನಿಕಲ್ ಮಾಹಿತಿ ಆಧಾರದಲ್ಲಿ ಜು.17 ರಂದು ಬಂಟ್ವಾಳದ ಬಸ್ ನಿಲ್ದಾಣದಲ್ಲಿ ಪತ್ತೆ ಹಚ್ಚಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆತಂದು ಪತಿ ಜೊತೆ ಕಳುಹಿಸಿಕೊಟ್ಟು ಪ್ರಕರಣ ಸುಖಾಂತ್ಯ ಮಾಡಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ್ ಮತ್ತು ಸಬ್ ಇನ್ಸ್ಪೆಕ್ಟರ್ ಚಂದ್ರಶೇಖರ್ ,ಸಬ್ ಇನ್ಸ್ಪೆಕ್ಟರ್ ಮುರುಳಿಧರ್ ನಾಯ್ಕ್ ನೇತೃತ್ವದ ಸಿಬ್ಬಂದಿ ಚರಣ್ ರಾಜ್ , ಬಸವರಾಜ್ , ಬೆನ್ನಿಚ್ಚನ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ: “ ಸು ಫ್ರಮ್ ಸೋ “ ನಿರ್ದೇಶಕ, ನಟ ಜೆ. ಪಿ. ತುಮಿನಾಡ್ ಕುಟುಂಬ ಸಮೇತರಾಗಿ ಭೇಟಿ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ಭಾರಿ ಮಳೆ: ಆ.29ರಂದು ದ.ಕ.ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ

Suddi Udaya

ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ಫನ್ಪಿನಿಟಿ ಚಿಣ್ಣರ ಪ್ಲೇ ಪಾರ್ಕ್ ಉದ್ಘಾಟನೆ, ಪೋಷಕರಿಗೆ ಆಟೋಟ ಸ್ಪರ್ಧೆ

Suddi Udaya

ಗುರುವಾಯನಕೆರೆ:ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ: ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ ಮಕ್ಕಳಿಗೆ ಪಿಂಕ್ (ಸಖೀ) ಬೂತ್ ನ ಪರಿಕಲ್ಪನೆಯ ಪಾಠ

Suddi Udaya
error: Content is protected !!