22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಅಗರಿಯಲ್ಲಿ ಪ್ರಾಣಕ್ಕೆ ಕಂಟಕ ವಾಗಿರುವ ವಿದ್ಯುತ್ ತಂತಿ.

ಮುಂಡಾಜೆ ಗ್ರಾಮದ ಅಗರಿ ಎಂಬ ಪರಿಸರದಲ್ಲಿ ಸುಮಾರು 50 ವರ್ಷಗಳ ಹಿಂದೆ ಹಾಕಿರುವ ವಿದ್ಯುತ್ ತಂತಿಗಳು ಬಹಳಷ್ಟು ಕ್ಷೀಣಿಸಿದ್ದು , ವರ್ಷದಲ್ಲಿ ಏಳೆಂಟು ಬಾರಿ ಈ ವಿದ್ಯುತ್ ತಂತಿ ಮಾರ್ಗಕ್ಕೆ ಕಡಿದು ಬೀಳುತ್ತಿದೆ. ಈ ಭಾಗದ ಲೈನ್ ಮ್ಯಾನ್ ದೂರು ನೀಡಿದ ತಕ್ಷಣ ಬಂದು ತಾತ್ಕಾಲಿಕವಾಗಿ ಸಮಸ್ಯೆಯನ್ನು ಬಗೆಹರಿಸುತ್ತಾರೆ. ಆದರೆ ಅದೆಷ್ಟು ಬಾರಿ ಇಲಾಖೆಗೆ ಮನವಿ ಮಾಡಿದರೂ ಕೂಡಾ ಈ ಪರಿಸರದಲ್ಲಿ ಹೊಸ ತಂತಿಯನ್ನು ಅಳವಡಿಸುತ್ತಿಲ್ಲ. ಈ ಹಿಂದೆ ಮೆಸ್ಕಾಂ ಇಲಾಖೆಯ ಅದಾಲತ್ ನಲ್ಲಿ ಕೂಡ ದೂರು ದಾಖಲಿಸಲ್ಪಟ್ಟಿದೆ. ಇದೀಗ ಮತ್ತೊಮ್ಮೆ ಇದೇ ಪರಿಸರದಲ್ಲಿ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳು ಹೋಗುವ ದಾರಿಯಲ್ಲೇ ವಿದ್ಯುತ್ ತಂತಿಯೊಂದು ಕಡಿದು ಬಿದ್ದು ಕುತ್ತಿಗೆ ನೇರಕ್ಕೆ ನೇತಾಡುತ್ತಿದ್ದು, ಪ್ರಾಣಕ್ಕೆ ಕಂಟಕವಾಗಿದೆ.

ಅದೃಷ್ಟವಶಾತ್ ಜು.18 ರಂದು ಶಾಲಾ-ಕಾಲೇಜುಗಳಿಗೆ ರಜೆ ಇದ್ದುದರಿಂದ ಆಗುವ ದೊಡ್ಡ ಅನಾಹುತ ತಪ್ಪಿದೆ. ಇದೇ ಮನೆಯಲ್ಲಿ ಈ ಹಿಂದೆ 3-4 ವರ್ಷಗಳಿಂದ ಕಾಲೇಜಿನ ಹಾಗೂ ಪ್ರೌಢಶಾಲೆಯ ಕ್ರೀಡಾಪಟು ವಿದ್ಯಾರ್ಥಿಗಳು ನೆಲೆಸಿದ್ದರು. ಇಂತಹ ಸಮಸ್ಯೆ ಇರುವುದರಿಂದಲೇ ಈ ವರ್ಷ ಇಲ್ಲಿ ಮಾಲೀಕರು ವಾಸಕ್ಕೆ ಅವಕಾಶ ನೀಡಲಿಲ್ಲ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ಪ್ರಾಣ ಹಾನಿ ಆಗುವ ಮೊದಲು ಈ ಪರಿಸರದಲ್ಲಿ ಹೊಸ ತಂತಿಯನ್ನು ಅಳವಡಿಸಬೇಕಾಗಿ ವಿನಂತಿಸಿಕೊಂಡಿದ್ದಾರೆ.

Related posts

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

Suddi Udaya

ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಶುಭ ಶುಕ್ರವಾರ ಆಚರಣೆ

Suddi Udaya

ಲಾಯಿಲ : ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆವಿದ್ಯಾರ್ಥಿಗಳಿಂದ ಸಿ.ಸಿ. ಟಿ.ವಿ ಹಸ್ತಾಂತರ ಹಾಗೂ ವರ್ಗಾವಣೆಗೊಂಡ ಶಿಕ್ಷಕಿಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya
error: Content is protected !!