September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಅಗರಿಯಲ್ಲಿ ಪ್ರಾಣಕ್ಕೆ ಕಂಟಕ ವಾಗಿರುವ ವಿದ್ಯುತ್ ತಂತಿ.

ಮುಂಡಾಜೆ ಗ್ರಾಮದ ಅಗರಿ ಎಂಬ ಪರಿಸರದಲ್ಲಿ ಸುಮಾರು 50 ವರ್ಷಗಳ ಹಿಂದೆ ಹಾಕಿರುವ ವಿದ್ಯುತ್ ತಂತಿಗಳು ಬಹಳಷ್ಟು ಕ್ಷೀಣಿಸಿದ್ದು , ವರ್ಷದಲ್ಲಿ ಏಳೆಂಟು ಬಾರಿ ಈ ವಿದ್ಯುತ್ ತಂತಿ ಮಾರ್ಗಕ್ಕೆ ಕಡಿದು ಬೀಳುತ್ತಿದೆ. ಈ ಭಾಗದ ಲೈನ್ ಮ್ಯಾನ್ ದೂರು ನೀಡಿದ ತಕ್ಷಣ ಬಂದು ತಾತ್ಕಾಲಿಕವಾಗಿ ಸಮಸ್ಯೆಯನ್ನು ಬಗೆಹರಿಸುತ್ತಾರೆ. ಆದರೆ ಅದೆಷ್ಟು ಬಾರಿ ಇಲಾಖೆಗೆ ಮನವಿ ಮಾಡಿದರೂ ಕೂಡಾ ಈ ಪರಿಸರದಲ್ಲಿ ಹೊಸ ತಂತಿಯನ್ನು ಅಳವಡಿಸುತ್ತಿಲ್ಲ. ಈ ಹಿಂದೆ ಮೆಸ್ಕಾಂ ಇಲಾಖೆಯ ಅದಾಲತ್ ನಲ್ಲಿ ಕೂಡ ದೂರು ದಾಖಲಿಸಲ್ಪಟ್ಟಿದೆ. ಇದೀಗ ಮತ್ತೊಮ್ಮೆ ಇದೇ ಪರಿಸರದಲ್ಲಿ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳು ಹೋಗುವ ದಾರಿಯಲ್ಲೇ ವಿದ್ಯುತ್ ತಂತಿಯೊಂದು ಕಡಿದು ಬಿದ್ದು ಕುತ್ತಿಗೆ ನೇರಕ್ಕೆ ನೇತಾಡುತ್ತಿದ್ದು, ಪ್ರಾಣಕ್ಕೆ ಕಂಟಕವಾಗಿದೆ.

ಅದೃಷ್ಟವಶಾತ್ ಜು.18 ರಂದು ಶಾಲಾ-ಕಾಲೇಜುಗಳಿಗೆ ರಜೆ ಇದ್ದುದರಿಂದ ಆಗುವ ದೊಡ್ಡ ಅನಾಹುತ ತಪ್ಪಿದೆ. ಇದೇ ಮನೆಯಲ್ಲಿ ಈ ಹಿಂದೆ 3-4 ವರ್ಷಗಳಿಂದ ಕಾಲೇಜಿನ ಹಾಗೂ ಪ್ರೌಢಶಾಲೆಯ ಕ್ರೀಡಾಪಟು ವಿದ್ಯಾರ್ಥಿಗಳು ನೆಲೆಸಿದ್ದರು. ಇಂತಹ ಸಮಸ್ಯೆ ಇರುವುದರಿಂದಲೇ ಈ ವರ್ಷ ಇಲ್ಲಿ ಮಾಲೀಕರು ವಾಸಕ್ಕೆ ಅವಕಾಶ ನೀಡಲಿಲ್ಲ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ಪ್ರಾಣ ಹಾನಿ ಆಗುವ ಮೊದಲು ಈ ಪರಿಸರದಲ್ಲಿ ಹೊಸ ತಂತಿಯನ್ನು ಅಳವಡಿಸಬೇಕಾಗಿ ವಿನಂತಿಸಿಕೊಂಡಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ಎಲೆಚುಕ್ಕಿ ರೋಗದಿಂದ ಅಡಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

Suddi Udaya

ಖೋ-ಖೋ ಪಂದ್ಯಾಟ: ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶಿಬರಾಜೆ ಪರಪ್ಪು ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಯ ಮಕ್ಕಳಿಗೆ ದಾನಿಗಳಿಂದ ಶಾಲು ಮತ್ತು ತಾಳ ವಿತರಣೆ

Suddi Udaya
error: Content is protected !!